ಪ್ರಜಾಸ್ತ್ರ ಸುದ್ದಿ
ಬಾಗಲಕೋಟೆ: ಸೋಮವಾರ ಬೆಂಗಳೂರಿನಲ್ಲಿ ಕಾಂಗ್ರೆಸ್ ನಾ ನಾಯಕಿ ಅನ್ನೋ ಮಹಿಳಾ ಸಮಾವೇಶ ನಡೆಸಿತು. ಈ ವೇಳೆ ವೇದಿಕೆಯಿಂದ ತೆರಳುವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ನಿರೂಪಕಿಯನ್ನು ನೋಡುವುದನ್ನು ವೈರಲ್ ಆಗಿ ಸಿಕ್ಕಾಪಟ್ಟೆ ಟ್ರೋಲ್ ಮಾಡಲಾಗಿದೆ. ಇದಕ್ಕೆ ಮಹಿಳಾ ಘಟಕದ ಅಧ್ಯಕ್ಷೆ ರಕ್ಷಿತಾ ಪ್ರತಿಕ್ರಿಯೆ ನೀಡಿದ್ದಾರೆ.
ಹೊಟ್ಟೆ ಕಿಚ್ಚಿಗೆ ಔಷಧಿ ಇಲ್ಲ. ಹೊಟ್ಟೆ ಕಿಚ್ಚಿನಿಂದ ಟ್ರೋಲ್ ಮಾಡುತ್ತಿದ್ದಾರೆ. ತಮಗೆ ಬೇಕಾದಂತೆ ಎಡಿಟ್ ಮಾಡಿ ಟ್ರೋಲ್ ಮಾಡಲಾಗುತ್ತಿದೆ. ಸಿದ್ದರಾಮಯ್ಯನವರು ಎಲ್ಲ ಮಹಿಳಾ ನಾಯಕಿಯರನ್ನು ಮಾತನಾಡಿಸಿಕೊಂಡು ಹೋಗುತ್ತಿದ್ದರು. ಲಾವಣ್ಯ ಬಲ್ಲಾಳ್ ನಿರೂಪಣೆ ಮಾಡುತ್ತಿದ್ದರು. ಯಾರು ಇವರು ಎಂದು ನೋಡಿದ ಸಿದ್ದರಾಮಯ್ಯ ಇವಾರ ಎಂದು ಕೈ ಮಾಡಿದ್ದಾರೆ. ಇದನ್ನು ಟ್ರೋಲ್ ಮಾಡಲಾಗುತ್ತಿದೆ ಎಂದು ಮಹಿಳಾ ಘಟಕದ ಅಧ್ಯಕ್ಷೆ ರಕ್ಷಿತಾ ಕಿಡಿ ಕಾರಿದ್ದಾರೆ.