ಪ್ರಜಾಸ್ತ್ರ ಸುದ್ದಿ
ಚಿಕ್ಕಮಗಳೂರು: ಬಿಜೆಪಿ ಶಾಸಕ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದರು. ಚಿಕ್ಕಮಗಳೂರಿನಲ್ಲಿ ಲೂಟಿ ರವಿ ಎನ್ನುತ್ತಾರೆ. ಹಾಗಂತ ನಾನು ಹೇಳಿರುವುದಲ್ಲ. ಅಲ್ಲಿನ ಜನ ಕರೆಯುತ್ತಾರೆ ಎಂದಿದ್ದರು. ಈ ಹೇಳಿಕೆಗೆ ತಿರುಗೇಟು ನೀಡಲು ಹೋಗಿ ವಿವಾದಾತ್ಮಕ ಹೇಳಿಕೆಯನ್ನು ಸಿ.ಟಿ ರವಿ ನೀಡಿದ್ದಾರೆ.
ಮೈಸೂರಿನಲ್ಲಿ ಸಿದ್ದರಾಮಯ್ಯನವರನ್ನು ಕಚ್ಚೆ ಹರುಕ ಎನ್ನುತ್ತಾರೆ. ಇದು ನಾನು ಹೇಳುತ್ತಿರುವುದಲ್ಲ. ಅಲ್ಲಿನ ಜನ ಹೇಳಿರುವುದು ಎಂದು ಹೇಳಿದರೆ ಅವರಿಗೆ ಮರ್ಯಾದೆ ಇರುತ್ತಾ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಹಾಗೂ ಸಿ.ಟಿ ರವಿ ನಡುವೆ ವಾಕ್ಸಮರ ನಡೆದಿದೆ.