ಪ್ರಜಾಸ್ತ್ರ ಸುದ್ದಿ
ಬಾಗಲಕೋಟೆ: ಬೊಮ್ಮಾಯಿ ವೀಕ್ ಲೀಡರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಸಿದ್ದರಾಮಯ್ಯ ವೀಕ್ ಲೀಡರ್ ಆಗಿದ್ದಕ್ಕೆ ಸೋತಿದ್ದು. ಸಿದ್ದರಾಮಯ್ಯ ಸ್ಟ್ರಾಂಗ್ ಆಗಿದ್ದರೆ ಯಾಕೆ ಸೋಲುತ್ತಿದ್ದರು? ಒಂದು ಬಾರಿ ಬಾದಾಮಿ, ಮತ್ತೊಮ್ಮೆ ಕೋಲಾರ, ವರುಣಾ ಅಂತೀರಿ. ನಿಮಗೆ ನಿಮ್ಮ ಅಪ್ಪ ಅಮ್ಮ ಯಾರು ಅಂತಾನೆ ಗೊತ್ತಿಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕರ್ನಾಟಕದಲ್ಲಿ ಸಿದ್ದರಾಮಯ್ಯನಂತಹ ದ್ರೋಹಿಯನ್ನು ಹಿಂದೆ ನೋಡಿಲ್ಲ. ಮುಂದೆಯೂ ನೋಡಲ್ಲ. ಕಾಂಗ್ರೆಸ್ ನಲ್ಲಿ ಯಾರ ನೇತೃತ್ವ, ಕ್ಷೇತ್ರ ಗೊತ್ತಿಲ್ಲ. ಜನರು ವೋಟ್ ಕೊಟ್ಟು ಗೆಲ್ಲಿಸಿಲ್ಲ ಆಗಲೇ ನಾನೇ ಸಿಎಂ ಅಂತಿದ್ದೀರಿ. ಕರ್ನಾಟಕ ರಾಜಕಾರಣದಲ್ಲಿ ಇಂತಹ ದ್ರೋಹಿ ನೋಡಿಲ್ಲ ಎಂದು ವಾಗ್ದಾಳಿ ನಡೆಸಿದರು.
ಕ್ಯಾಪ್ಟನ್ ಗೆ ಪ್ಲೇಸ್ ಇಲ್ಲ, ಇನ್ನು ಫಾಲೋವರ್ಸ್ ಗತಿಯೇನು. ಮಾಜಿ ಸಿಎಂ ಸಿದ್ದರಾಮಯ್ಯ ಆಡುವ ಆಟ ಬಿಜೆಪಿ ಮೇಲೂ ನಡೆಯಲ್ಲ. ಜನರ ಮೇಲೂ ನಡೆಯಲ್ಲ. ಕಾಂಗ್ರೆಸ್ ನಲ್ಲಿ ಮಾತ್ರ ನಡೆಯುತ್ತೆ ಅಂತಾ ಕುಟುಕಿದರು.