ಪ್ರಜಾಸ್ತ್ರ ಸುದ್ದಿ
ವಿಜಯಪುರ: ಸಂಕ್ರಮಣದ ನಿಮಿತ್ತ ಪಟ್ಟಣದ ಪ್ರಸಿದ್ಧ ಸಿದ್ದೇಶ್ವರ ಜಾತ್ರಾ ಮಹೋತ್ಸವ ನಡೆಯಿತು. ಜ್ಞಾನ ಆಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರು ಇದೆ ಜನವರಿ 2ರಂದು ಲಿಂಗೈಕ್ಯರಾದರು. ಹೀಗಾಗಿ ಅತ್ಯಂತ ಸರಳವಾಗಿ ಜಾತ್ರೆ ನಡೆಸಲಾಗುತ್ತಿದೆ.
ಪಟ್ಟಣದಲ್ಲಿರುವ ದೇವಸ್ಥಾನಕ್ಕೆ ಮುಂಜಾನೆಯಿಂದಲೇ ಭಕ್ತರು ಆಗಮಿಸುತ್ತಿದ್ದು, ದೇವರ ದರ್ಶನ ಪಡೆಯುತ್ತಿದ್ದಾರೆ. ಪ್ರತಿ ವರ್ಷ ಅದ್ಧೂರಿ ಜಾತ್ರೆ ನಡೆಯುತ್ತದೆ. ಶ್ರೀಗಳ ನಿಧನದಿಂದಾಗಿ ಸರಳ ಜಾತ್ರೆ ನಡೆಯುತ್ತದೆ. ಆದರೂ ಭಕ್ತರ ದಂಡು ಹರಿದು ಬರುತ್ತಿದೆ.