ಚೇತನಹಳ್ಳಿ ಎಸ್ಟೇಟ್ ನಲ್ಲಿ ಸಿದ್ಧಾರ್ಥ ಅಂತ್ಯಕ್ರಿಯೆ

363

ಚಿಕ್ಕಮಗಳೂರು: ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ ಅವರ ಅಂತ್ಯಕ್ರಿಯೆ ಚಿಕ್ಕಮಗಳೂರಿನ ಚೇತನಹಳ್ಳಿ ಎಸ್ಟೇಟ್ ನಲ್ಲಿ ಧಾರ್ಮಿಕ ವಿಧಿ ವಿಧಾನಗಳ ಮೂಲಕ ನಡೆಯಿತು.

ಚೇತನಹಳ್ಳಿ ಎಸ್ಟೇಟ್ ನಲ್ಲಿ ಒಕ್ಕಲಿಗ ಸಂಪ್ರದಾಯದ ವಿಧಿ ವಿಧಾನಗಳ ಮೂಲಕ ಸಿದ್ಧಾರ್ಥ ಅಂತ್ಯಕ್ರಿಯೆ ಮಾಡಲಾಯ್ತು. ಸಿದ್ಧಾರ್ಥ ಅವರ ಇಬ್ಬರು ಪುತ್ರರು ಚಿತೆಗೆ ಅಗ್ನಸ್ಪರ್ಶ ಮಾಡಿದ್ರು.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚೇತನಹಳ್ಳಿ ಎಸ್ಟೇಟ್ ನಲ್ಲಿ ನಡೆದ ಅಂತ್ಯ ಸಂಸ್ಕಾರದ ವೇಳೆ ಕುಟುಂಬಸ್ಥರು, ಆಪ್ತ ಸ್ನೇಹಿತ ಬಳಗ, ಮಾವ ಮಾಜಿ ಸಿಎಂ ಕೃಷ್ಣ ಅವರ ರಾಜಕೀಯ ಒಡನಾಡಿಗಳು, ಕಾಫಿ ಡೇ ನ ಮುಖ್ಯಸ್ಥರು, ಹಿತೈಷಿಗಳು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ರು.

ಅಂತ್ಯಕ್ರಿಯೆ ವೇಳೆ ಯಾವುದೇ ರೀತಿಯಿಂದ ತೊಂದರೆಯಾಗದಂತೆ ಪೊಲೀಸ್ ಭದ್ರತೆಯನ್ನ ಒದಗಿಸಲಾಗಿತ್ತು. ಹೀಗಾಗಿ ಯಾವುದೇ ರೀತಿಯ ನೂಕುನುಗ್ಗಲು ಆಗದೆ, ಎಲ್ಲವೂ ವ್ಯವಸ್ಥಿತ ರೀತಿಯಿಂದ ನಡೆಯಿತು.




Leave a Reply

Your email address will not be published. Required fields are marked *

error: Content is protected !!