ಪ್ರಜಾಸ್ತ್ರ ಸುದ್ದಿ
ವಿಜಯಪುರ: ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಶನಿವಾರ ಸಿಎಂ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿ ಇತರೆ ರಾಜಕೀಯ ಗಣ್ಯರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು. ಸಧ್ಯ ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.
ಆಶ್ರಮದ ಆವರಣದಲ್ಲಿ ಜಿಲ್ಲಾಧಿಕಾರಿ ವಿಜಯ್ ಮಹಾಂತೇಶ್, ಎಸ್ಪಿ ಆನಂದ್ ಕುಮಾರ್ ಇದ್ದು, ಪರಿಸ್ಥಿತಿ ಗಮನಿಸುತ್ತಿದ್ದಾರೆ. ಮೈಸೂರಿನ ಸುತ್ತೂರು ಮಠದ ಸ್ವಾಮೀಜಿ ಸೇರಿ ಇತರೆ ಮಠಾಧೀಶರು ಆಶ್ರಮಕ್ಕೆ ಆಗಮಿಸಿದ್ದು, ಭಕ್ತರಲ್ಲಿ ಆತಂಕ ಮನೆ ಮಾಡಿದೆ.