ಪ್ರಜಾಸ್ತ್ರ ಸುದ್ದಿ
ಬಾಗಲಕೋಟೆ: ದಿನಕ್ಕೊಂದು ಹೇಳಿಕೆಗಳನ್ನ ಕೊಡುತ್ತಾ, ಸರ್ಕಾರದವ ವಿರುದ್ಧ ಅನಗತ್ಯ ಆರೋಪಗಳನ್ನ ಮಾಡುತ್ತಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲು ಹಾತೊರೆಯುತ್ತಿದ್ದಾರೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.
ಇಡೀ ದೇಶದಲ್ಲಿ ಕಾಂಗ್ರೆಸ್ ಅವಸಾನದ ಅಂಚಿನಲ್ಲಿದೆ. ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪ ವಿರುದ್ಧ ಮಾತನಾಡುವುದನ್ನ ನಿಲ್ಲಿಸೇಕು. ಸರ್ಕಾರದ ವಿರುದ್ಧ ಟೀಕೆ ಮಾಡುವುದನ್ನ ಬಿಟ್ಟು ಸಂಕಷ್ಟದ ಸಮಯದಲ್ಲಿ ಸಲಹೆ ಸೂಚನೆಗಳನ್ನ ನೀಡಲಿ ಎಂದು ಹೇಳಿದ್ದಾರೆ.