ಬೆಂಗಳೂರು: 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಅನುಭವಿಸಿದ ಬಳಿಕ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ರು. ಇದನ್ನ ಹೈಕಮಾಂಡ್ ಒಪ್ಪಿಕೊಳ್ಳುವ ಮೊದ್ಲೇ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಲು ಮುಂದಾಗಿದ್ರು ಅನ್ನೋ ಮಾತು ಕೇಳಿ ಬರ್ತಿದೆ.
ಶಾಸಕತ್ವಕ್ಕೂ ರಾಜೀನಾಮೆ ಕುರಿತು ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ರಂತೆ. ಅಲ್ದೇ, ಮಾಜಿ ಸ್ಪೀಕರ್ ರಮೇಶಕುಮಾರ ಸಿದ್ದರಾಮಯ್ಯನವರ ಜೊತೆ ಮಾತ್ನಾಡಿ, ಬಾದಾಮಿ ಜನತೆ ನಿಮ್ಮ ಮೇಲೆ ನಂಬಿಕೆ ಇಟ್ಟಿದ್ದಾರೆ. ಆ ನಂಬಿಕೆಯಿಂದ ನಿಮ್ಮನ್ನು ಆಯ್ಕೆ ಮಾಡಿದ್ದಾರೆ. ಅವರ ನಿರೀಕ್ಷೆಯನ್ನ ಸುಳ್ಳು ಮಾಡ್ಬೇಡಿ ಅಂತಾ ಮನವೊಲಿಸಿದ್ಮೇಲೆ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ ಅಂತಾ ಹೇಳಲಾಗ್ತಿದೆ.