ಬೈ ಎಲೆಕ್ಷನ್ ಬಳಿಕ ಬಿಎಸ್ವೈ ರಾಜೀನಾಮೆ ಕೊಡಬೇಕಾಗುತ್ತೆ

364

ಬೆಂಗಳೂರು: ಉಪ ಚುನಾವಣೆಯಲ್ಲಿ ಬಿಜೆಪಿ ಒಂದು ವೇಳೆ 8 ಸ್ಥಾನಗಳಲ್ಲಿ ಗೆಲ್ಲದೆ ಹೋದ್ರೆ ಸಿಎಂ ಬಿ.ಎಸ್ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗುತ್ತೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಬೈ ಎಲೆಕ್ಷನ್ ನಲ್ಲಿ ಬಿಜೆಪಿ ಸೋಲು ಅನುಭವಿಸಿದ್ರೆ ಜೆಡಿಎಸ್ ಬೆಂಬಲ ನೀಡಲ್ಲ. ಯಾಕಂದ್ರೆ ನಾನು ಈ ಹಿಂದೆ ಜೆಡಿಎಸ್ ನಲ್ಲಿದ್ದು ಬಂದವನು. ಜೆಡಿಎಸ್ ಬಗ್ಗೆ ನನ್ಗೆ ಚೆನ್ನಾಗಿ ಗೊತ್ತಿದೆ. ಹೀಗಾಗಿ ಗೊಂದಲದಲ್ಲಿ ಬಿಎಸ್ವೈ 15 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ ಅಂತಾ ಹೇಳ್ತಿದ್ದಾರೆ ಎಂದು ಕಾಲೆಳೆದ್ರು.

ಮಧ್ಯಂತರ ಚುನಾವಣೆ ಬಂದ್ರೆ ಕಾಂಗ್ರೆಸ್ ನೂರಕ್ಕೆ ನೂರರಷ್ಟು ಅಧಿಕಾರಕ್ಕೆ ಬರುವುದು ಖಚಿತ ಅಂತಾ ಹೇಳಿದ್ರು. ಆಗ ನೀವೇ ಮತ್ತೆ ಸಿಎಂ ಆಗ್ತೀರಾ ಎಂದು ಮಾಧ್ಯಮದವರು ಮರು ಪ್ರಶ್ನೆ ಹಾಕಿದಾಗ, ನಾನು ಸಿಎಂ ಆಗೋದು ಬಿಡೋದು ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದು ಅಂತಾ ಹೇಳಿದ್ರು. ಡಿಸೆಂಬರ್ 3ರ ತನಕ ನಾನು ಎಲ್ಲೆಡೆ ಪ್ರಚಾರ ಮಾಡ್ತಿದ್ದು, ಹೆಚ್ಚಿನ ಸ್ಥಾನಗಳನ್ನ ನಮ್ಮ ಅಭ್ಯರ್ಥಿಗಳು ಪಡೆಯಲಿದ್ದಾರೆ ಅನ್ನೋ ವಿಶ್ವಾಸ ವ್ಯಕ್ತಪಡಿಸಿದ್ರು.




Leave a Reply

Your email address will not be published. Required fields are marked *

error: Content is protected !!