ತೇಜಸ್ವಿ ಸೂರ್ಯ ಅಪ್ರಬುದ್ಧ ರಾಜಕಾರಣಿ

351

ಬೆಳಗಾವಿ: ರಾಜ್ಯಕ್ಕೆ ಕೇಂದ್ರದ ನೆರವಿನ ಅಗತ್ಯವಿಲ್ಲ ಎಂದ ಸಂಸದ ತೇಜಸ್ವಿ ಸೂರ್ಯ ಅಪ್ರಬುದ್ಧ ರಾಜಕಾರಣಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಅವನು ಎಲ್ಲಿಯಾದ್ರೂ ಸಿಕ್ರೆ ಸಂವಿಧಾನ ಓದಿಕೊಳ್ಳಲು ಹೇಳಿ ಅಂತಾ ಕುಟುಕಿದ್ದಾರೆ.

ನೆರೆ ಸಂತ್ರಸ್ತರಿಗೆ ಸರಿಯಾಗಿ ಪರಿಹಾರ ನೀಡುವಲ್ಲಿ ವಿಫಲವಾದ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಲಾಗ್ತಿದೆ. ರಾಯಣ್ಣ ಸರ್ಕಲ್ ಬಳಿಯಿರುವ ಕಾಂಗ್ರೆಸ್ ಕಚೇರಿ ಬಳಿ ಪ್ರತಿಭಟನೆ ನಡೆಸಲಾಗ್ತಿದೆ. ಈ ವೇಳೆ ಮಾತ್ನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ತೇಜಸ್ವಿ ಸೂರ್ಯನ ವಿರುದ್ಧ ವಾಗ್ದಾಳಿ ನಡೆಸಿದ್ರು.

ಯಡಿಯೂರಪ್ಪ ರಾಜ್ಯ ಕಂಡ ಅತ್ಯಂತ ದುರ್ಬಲ ಸಿಎಂ. ಮೋದಿ, ಅಮಿತ ಶಾ ಮುಂದೆ ನಿಂತು ಮಾತ್ನಾಡುವ ಧೈರ್ಯವಿಲ್ಲ. ಯಡಿಯೂರಪ್ಪ ನೋಡಿದ್ರೆ ಅಯ್ಯೋ ಪಾಪ ಅನಿಸುತ್ತೆ ಅಂತಾ ವ್ಯಂಗ್ಯವಾಡಿದ್ದಾರೆ. ಬಿಎಸ್ವೈ ದೆಹಲಿಗೆ ಹೋದ್ರೆ ಮೋದಿ, ಅಮಿತ ಶಾ ಭೇಟಿಯಾಗುವುದಿಲ್ಲ. ಕರ್ನಾಟಕದ ಬಗ್ಗೆ ಮೋದಿ ಯಾಕೆ ಈ ನಿರ್ಲಕ್ಷ್ಯ ಎಂದು ಪ್ರಶ್ನೆ ಮಾಡುವ ಮೂಲಕ ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!