ಸಿಂದಗಿ: ತಾಲೂಕಿನ ಬಳಗಾನೂರ ಗ್ರಾಮದಲ್ಲಿಂದು ಸಂಜೆ 5 ಗಂಟೆಗೆ ತ್ಯಾಗವೀರ ಶ್ರೀ ಶಿರಸಂಗಿ ಲಿಂಗರಾಜ ದೇಸಾಯಿಯವರ 159ನೇ ಜಯಂತಿ ಹಾಗೂ ಶಿವಯೋಗಿ ಶ್ರೀ ಸಿದ್ದರಾಮೇಶ್ವರರವರ 848ನೇ ಜಯಂತಿ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿದೆ.
ಶ್ರೀ ಲಿಂಗರಾಜ ವಿವಿದೋದ್ದೇಶ ಸಂಸ್ಥೆ ಗ್ರಾಮದ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದನ್ನ ರಾಜಕೀಯ ಧುರೀಣರಾದ ಗುರು ಹುಲ್ಲೂರ ಉದ್ಘಾಟನೆ ಮಾಡಲಿದ್ದಾರೆ. ಇದರ ದಿವ್ಯ ಸಾನಿಧ್ಯವನ್ನ ಪ.ಪೂ ಡಾ ಶ್ರೀ ಸ್ವರೂಪಾನಂದ ಸ್ವಾಮೀಜಿಗಳು, ಅಧ್ಯಕ್ಷತೆಯನ್ನ ಬಸವರಾಜ ಶಿರಸಗಿ ವಹಿಸಿಕೊಳ್ಳಲಿದ್ದಾರೆ. ಕರ್ನಾಟಕ ಪ್ರಕಾಶಕರ ಸಂಘದ ಉಪಾಧ್ಯಕ್ಷ ಸಿದ್ದಣ್ಣ ಉತ್ನಾಳ ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಕಾರ್ಯಕ್ರಮದಲ್ಲಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗ್ತಿದೆ. ಈ ವೇಳೆ ಸಮಾಜದ ಮುಖಂಡರು, ರಾಜಕೀಯ ನಾಯಕರು, ಗ್ರಾಮ ಪಂಚಾಯ್ತಿ ಪದಾಧಿಕಾರಿಗಳು ಸೇರಿದಂತೆ ಗ್ರಾಮಸ್ಥರು ಭಾಗವಹಿಸ್ತಿದ್ದಾರೆ.