ಸಿಎಂ ಸೀಟ್ ಖಾಲಿ ಇಲ್ಲ : ಸಿದ್ದು

337

ಹುಬ್ಬಳ್ಳಿ: ಕಾಂಗ್ರೆಸ್‌ ಹಿರಿಯ ಮುಖಂಡ ಸಿದ್ದರಾಮಯ್ಯಗೆ ಮತ್ತೆ ಮುಖ್ಯಮಂತ್ರಿ ಪಟ್ಟ ನೀಡಬೇಕೆಂಬ ಹಕ್ಕೊತ್ತಾಯ ಹೆಚ್ಚಾಗಿರುವ ಬೆನ್ನಲ್ಲೇ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. 


ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಎಲ್ಲ ವದಂತಿಗಳಿಗೆ ತೆರೆ ಎಳೆದರು.

ಸದ್ಯ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ಎಚ್ ಡಿ ಕುಮಾರಸ್ವಾಮಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಈಗ ಪರಿಸ್ಥಿತಿ ಉದ್ಭವಿಸುವುದೇ ಇಲ್ಲ ಎಂದು ತಿಳಿಸಿದರು.

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಎಂದು ಬಹುತೇಕ ಶಾಸಕರು ಹಕ್ಕೊತ್ತಾಯ ಮಂಡಿಸಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಮಾಜಿ ಮುಖ್ಯಮಂತ್ರಿ, ಕೆಲವರು ಅಭಿಮಾನದಿಂದ ಈ ರೀತಿಯ ಹೇಳಿಕೆ ನೀಡಿದ್ದಾರೆ. ಇದನ್ನು ತಪ್ಪು ಎಂದು ಹೇಳುವುದಕ್ಕೆ ಆಗುವುದಿಲ್ಲ ಎಂದರು.

ಸಿದ್ದರಾಮಯ್ಯ, ಮಾಜಿ ಸಿಎಂ

ಮೇ 23ರಂದು ಲೋಕಸಭಾ ಚುನಾವಣೆಯ ನಂತರ ಮುಖ್ಯಮಂತ್ರಿ ಬದಲಾವಣೆಯಾಗಲಿದ್ದಾರೆಯೇ ಎಂಬ ಪ್ರಶ್ನೆಗೆ, ಇಂಥ ಊಹಾಪೋಹಗಳಿಗೆ ಉತ್ತರಿಸಲು ಆಗುವುದಿಲ್ಲ ಎಂದು ತಮ್ಮ ಎಂದಿನ ಧಾಟಿಯಲ್ಲಿ ಹೇಳಿದರು.

ಆದರೆ, ಕೊಟ್ಟರೆ, ಸಿಕ್ಕರೆ, ಇಂಥ ಮಾತುಗಳಿಗೆ ಯಾವುದೇ ರೀತಿಯ ಉತ್ತರವೂ ಸಿಗುವುದಿಲ್ಲ. ಸದ್ಯ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಎಂಬುದಂತೂ ಸ್ಪಷ್ಟ ಎಂದು ಚರ್ಚೆಗೆ ಪೂರ್ಣ ವಿರಾಮ ಹಾಕಿದರು ಮಾಜಿ ಸಿಎಂ ಸಿದ್ದರಾಮಯ್ಯ. 




Leave a Reply

Your email address will not be published. Required fields are marked *

error: Content is protected !!