ಸಿದ್ದು ನಿಜಕನಸುಗಳು ಪುಸ್ತಕಕ್ಕೆ ತಡೆಯಾಜ್ಞೆ

131

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯನವರ ವಿರುದ್ಧ ತನ್ನ ಟೀಕಾಸ್ತ್ರ ಮುಂದುವರೆಸಿರುವ ಬಿಜೆಪಿ, ಸೋಮವಾರ ಮಧ್ಯಾಹ್ನ ‘ಸಿದ್ದು ನಿಜಕನಸುಗಳು’ ಪುಸ್ತಕ ಬಿಡುಗಡೆಗೆ ಮುಂದಾಗಿತ್ತು. ಇದಕ್ಕೆ ಸಿವಿಲ್ ಕೋರ್ಟ್ ತಡೆಯಾಜ್ಞೆ ನೀಡಿದೆ. ಸಿದ್ದರಾಮಯ್ಯ ಪುತ್ರ, ಶಾಸಕ ಯತೀಂದ್ರ ತಡೆಯಾಜ್ಞೆಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿ ಪರಿಶೀಲನೆ ನಡೆಸಿದ ಸಿವಿಲ್ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಬಿಜೆಪಿಯ ಈ ನಡೆಯನ್ನು ಖಂಡಿಸಿ ಕುರುಬ ಸಮಾಜದಿಂದ ಪ್ರತಿಭಟನೆ ಸಹ ನಡೆದಿದೆ. ಮಾಧ್ಯಮದವರು ಸಿಎಂ ಬೊಮ್ಮಾಯಿ ಅವರಿಗೆ ಈ ಬಗ್ಗೆ ಪ್ರಶ್ನಿಸಿದರೆ, ಅವರು ಉತ್ತರಿಸಲು ನಿರಾಕರಿಸಿದರು.

ಈ ಪುಸ್ತಕ ಬಿಡುಗಡೆಯನ್ನು ಖಂಡಿಸಿ ಟೌನ್ ಹಾಲ್ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇನ್ನು ಟಿಪ್ಪು ಖಡ್ಗ ಹಿಡಿದು, ಡ್ರೆಸ್ ಹಾಕಿಕೊಂಡಿದ್ದು ಯಡಿಯೂರಪ್ಪ, ಶೋಭಾ ಕರಂದ್ಲಾಜೆ ಅಲ್ವಾ? ಟಿಪ್ಪು ಬಗ್ಗೆ ಶೇಖ್ ಅಲಿ ಪುಸ್ತಕ ಬರೆದಾಗ ಮುನ್ನುಡಿ ಬರೆದವರು ಯಾರು ಎಂದು ಕಾಂಗ್ರೆಸ್ ನಾಯಕರು ಪ್ರಶ್ನಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!