ಸಿದ್ರಾಮಯ್ಯ ಅಲ್ಲ.. ನಿದ್ರಾಮಯ್ಯ: ಈಶ್ವರಪ್ಪ

298

ಬಾಗಲಕೋಟೆ: ಸೋಲಿನ ಬಗ್ಗೆ ಸಿದ್ದರಾಮಯ್ಯ ಹೇಳಿದ್ದನ್ನು ನಾನು ಅನುಮೋದನೆ ಮಾಡ್ತಿನಿ ಅಂತಾ ಮಾಜಿ ಡಿಸಿಎಂ, ಶಾಸಕ ಕೆ.ಎಸ್ ಈಶ್ವರಪ್ಪ ಬಾಗಲಕೋಟೆಯಲ್ಲಿ ಹೇಳಿದ್ದಾರೆ. ನೀವೇನು ಮಾಡಿಲ್ಲ ನಿದ್ದೆ ಮಾಡಿ ಅಂತ ಮನೆಗೆ ಕಳಿಸಿದ್ದಾರೆ. ಸಿದ್ದರಾಮಯ್ಯ ಅಂತ ಕರೆಯೋದಿಲ್ಲ ನಿಮ್ಮನ್ನು ನಿದ್ರಾಮಯ್ಯ ಅಂತ ಕರೆಯುತ್ತಾರೆ ಅಂತಾ ವ್ಯಂಗ್ಯವಾಡಿದ್ದಾರೆ.

ಮೋದಿ ಕೆಲಸಗಾರ ಅಂತ ವೋಟ್ ಹಾಕಿದ್ದಾರೆ. ನೀವು ಕೆಲಸ ಮಾಡಲಿಲ್ಲ ನಿದ್ದೆ ಮಾಡಿದ್ರಿ. ಅದಕ್ಕೆ ನಿದ್ದೆ ಮಾಡಲು ಕಳಿಸಿದ್ದಾರೆ. ಕೋಮುವಾದಿ ಬಿಜೆಪಿ ಎಂದು ಹೇಳಿಕೊಂಡು ಒಂದಾದ್ರಿ. ಅಂಬೇಡ್ಕರ್ ಅವರನ್ನೆ ಕಾಂಗ್ರೆಸ್ ನವರು ಎರಡು ಬಾರಿ ಸೋಲಿಸಿದ್ರು. ಅಂತದ್ದರಲ್ಲಿ ಖರ್ಗೆ, ಮುನಿಯಪ್ಪನವರನ್ನು ಬಿಡ್ತಾರಾ ಎಂದು ದೇವೆಗೌಡರು ಹೇಳಿದ್ದಾರೆ. ಹೀಗಾಗಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಬಗ್ಗೆ ಸಿದ್ದರಾಮಯ್ಯ, ದೇವೆಗೌಡ, ಕಾಂಗ್ರೆಸ್ ಶಾಸಕರಲ್ಲೇ ಭಿನ್ನಮತವಿದೆ ಅಂತಾ ಈಶ್ವರಪ್ಪ ಹೇಳಿದ್ದಾರೆ.

ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕೆಂದು ಅವರ ಸೆರಗು ಹಿಡಿದುಕೊಂಡು ಕೆಲವರು ಓಡಾಡುತ್ತಿದ್ದಾರೆ. ಸಿದ್ದರಾಮಯ್ಯನವರೆ ಮೋದಿಗೆ ಎಷ್ಟು ಟೀಕೆ ಮಾಡುತ್ತಿರೋ ಮಾಡಿ. ಜನ ನಿಮ್ಮನ್ನು ಎಲ್ಲಿ ಇಡಬೇಕೋ ಅಲ್ಲಿಟ್ಟಿದ್ದಾರೆ ಅಂತಾ ವಾಗ್ದಾಳಿ ನಡೆಸಿದ್ದಾರೆ. ಪಾಪಾ ಬಾದಾಮಿ ಜನ ಮುಗ್ದರು. ಏನು ಗೊತ್ತಿಲ್ಲದೆ ಸಿದ್ದರಾಮಯ್ಯನವರನ್ನು ಗೆಲ್ಲಿಸಿದರು. ನಂತರ ಅವರ ಹಣೆಬರಹ ಗೊತ್ತಾಯ್ತು ಲೋಕಸಭೆ ಚುನಾವಣೆಯಲ್ಲಿ ತೋರಿಸಿದ್ರು ಅಂತಾ ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!