ಸಿದ್ಧಗಂಗಾ ಶ್ರೀಗಳ ಸ್ಮರಣಾರ್ಥ ಫೆಬ್ರವರಿಯಲ್ಲಿ ದಾಸೋಹ: ಸಿಎಂ ಬೊಮ್ಮಾಯಿ

114

ಪ್ರಜಾಸ್ತ್ರ ಸುದ್ದಿ

ತುಮಕೂರು: ಸಿದ್ಧಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಗಳ 4ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಸೇರಿದಂತೆ ಇತರರು ಭಾಗವಹಿಸಿದ್ದರು.

ಈ ವೇಳೆ ಮಾತನಾಡಿದ ಅವರು ಶ್ರೀಗಳ ಹೆಸರಿನಲ್ಲಿ ಫೆಬ್ರವರಿ ತಿಂಗಳಲ್ಲಿ ಸರ್ಕಾರದ ವತಿಯಿಂದ ದಾಸೋಹ ನಡೆಸಲಾಗುತ್ತೆ. ನಡೆದಾಡುವ ದೇವರು, ತ್ರಿವಿಧ ದಾಸೋಹಿ ಎಂದು ಭಕ್ತರಿಂದ ಕರೆಸಿಕೊಳ್ಳುತ್ತಿದ್ದ ಸ್ವಾಮೀಜಿಗಳ ಆಶೀರ್ವಾದ ನಾಡಿನ ಜನರ ಮೇಲೆ ಇರುತ್ತೆ. ಇನ್ನು ಮುಂದೆ ಯಾವುದೇ ಆಚರಣೆಗಳಿಗೂ ಸಾರ್ವಜನಿಕ ರಜೆ ಇಲ್ಲ. ಅವರ ಹೆಸರಿನಲ್ಲಿ ಪುಣ್ಯಸ್ಮರಣೆ ಮಾಡಿ ಗೌರವ ಸಲ್ಲಿಸಲಾಗುವುದು ಎಂದರು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಕೇಂದ್ರ ಹಾಗೂ ರಾಜ್ಯ ನಾಯಕರು ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಲಿಂಗೈಕ್ಯ ಶಿವಕುಮಾರ ಶ್ರೀಗಳ ಗದ್ದುಗೆಗೆ ನಮನ ಸಲ್ಲಿಸಿದರು.




Leave a Reply

Your email address will not be published. Required fields are marked *

error: Content is protected !!