ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರೌಡಿ ಶೀಟರ್ ಸೈಲೆಂಟ್ ಸುನೀಲ್ ಪೊಲೀಸರಿಗೆ ಬೇಕಾಗಿದ್ದಾನೆ. ಆದರೆ, ಕೆಳೆದ ಭಾನುವಾರ ಬಹಿರಂಗ ಕಾರ್ಯಕ್ರಮ ಮಾಡಿದ್ದು, ಬಿಜೆಪಿ ನಾಯಕರು ಭಾಗವಹಿಸಿದ್ದಾರೆ. ಆತ ಮುಂಬರುವ ವಿಧಾನಸಭಾ ಚುನಾವಣೆಯ ಟಿಕೆಟ್ ಆಕಾಂಕ್ಷಿ ಎನ್ನಲಾಗುತ್ತಿದೆ. ಈ ನಡೆಯನ್ನು ಕಾಂಗ್ರೆಸ್ ಖಂಡಿಸಿದ್ದು, ತೀವ್ರ ವಾಗ್ದಾಳಿ ನಡೆಸಿದೆ.
ಈ ಕುರಿತು ಸ್ಪಷ್ಟನೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಯಾವುದೇ ಕಾರಣಕ್ಕೂ ಸೈಲೆಂಟ್ ಸುನೀಲನನ್ನ ಬಿಜೆಪಿಗೆ ಸೇರಿಸಿಕೊಳ್ಳುವುದಿಲ್ಲ ಎಂದಿದ್ದಾರೆ. ಇನ್ನೊಂದು ಕಡೆ ಕಾಂಗ್ರೆಸ್ ನಲ್ಲಿ ಎಷ್ಟು ಜನ ರೌಡಿ ಶೀಟರ್ ಗಳಿದ್ದಾರೆ ಎಂದು ಪ್ರಶ್ನಿಸುವ ಮೂಲಕ ಮುಖ್ಯಮಂತ್ರಿ ಬೊಮ್ಮಾಯಿ ಇದನ್ನು ಸಮರ್ಥಿಸಿಕೊಂಡಿದ್ದಾರೆ.