ಪ್ರಜಾಸ್ತ್ರ ಸುದ್ದಿ
ಸಿಂದಗಿ: ತಾಲೂಕು ವಿಧಾನಸಭಾ ಉಪ ಚುನಾವಣೆಯ ಮತದಾನದ ಬಿರುಸಿನಿಂದ ನಡೆಯುತ್ತಿದೆ. ಮತದಾರರು ತಮ್ಮ ಹಕ್ಕು ಚಲಾವಣೆ ಮಾಡುತ್ತಿದ್ದಾರೆ.
ಇನ್ನು ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ದೇವಣಗಾಂವದಲ್ಲಿ, ಕಾಂಗ್ರೆಸ್ ಅಭ್ಯರ್ಥಿ ಮಲಘಾಣ ಹಾಗೂ ಜೆಡಿಎಸ್ ಅಭ್ಯರ್ಥಿ ಗಣಿಹಾರ ಗ್ರಾಮದಲ್ಲಿ ಮತ ಚಲಾಯಿಸಿದರು. ಇನ್ನು ಕೆಆರ್ ಎಸ್ ಅಭ್ಯರ್ಥಿ ಡಾ.ಸುನೀಲಕುಮಾರ್ ಹಬ್ಬಿ ಈ ಕ್ಷೇತ್ರದ ನಿವಾಸಿಯಾಗದೆ ಇರುವುದ್ರಿಂದ ಮತದಾನ ವಂಚಿತರಾಗಿದ್ದಾರೆ.
ಮಧ್ಯಾಹ್ನದವರೆಗೆ ಶೇಕಡ 30ರಷ್ಟು ಮತದಾನವಾಗಿದೆ. ಪಟ್ಟಣಕ್ಕಿಂತ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಮತದಾನ ನಡೆಯುತ್ತಿದೆ.