ಸಿಂದಗಿ ಉಪ ಕದನ: ಕಾಂಗ್ರೆಸ್ ಬೃಹತ್ ಸಮಾವೇಶ ರದ್ದು?

615

ಪ್ರಜಾಸ್ತ್ರ ಬ್ರೇಕಿಂಗ್ ನ್ಯೂಸ್

ವಿಜಯಪುರ: ಸಿಂದಗಿ ವಿಧಾನಸಭಾ ಉಪ ಚುನಾವಣೆ ಸಂಬಂಧ ಕಾಂಗ್ರೆಸ್ ಬೃಹತ್ ಸಮಾವೇಶ ನಡೆಸಲು ತಯಾರಿ ನಡೆಸಿದೆ. ಮಾರ್ಚ್ 19, ಶುಕ್ರವಾರದಂದು ಪಟ್ಟಣದಲ್ಲಿ ಸುಮಾರು 30 ರಿಂದ 40 ಸಾವಿರ ಜನರನ್ನ ಸೇರಿಸಿ ಬೃಹತ್ ಸಮಾವೇಶ ನಡೆಸಲು ಪ್ಲಾನ್ ಮಾಡಿದೆ. ಆದ್ರೆ, ಆರಂಭದಲ್ಲಿ ವಿಘ್ನ ಎದುರಾಗಿದೆ.

ಹೌದು, ರಾಜ್ಯದಲ್ಲಿ ಕೋವಿಡ್ 19 ಎರಡನೇ ಅಲೆ ಎದ್ದಿರುವ ಪರಿಣಾಮ, ಸಾವಿರಾರು ಸಂಖ್ಯೆಯಲ್ಲಿ ಜನರನ್ನು ಸೇರಿಸುವಂತಿಲ್ಲ. ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿರುವ 13 ಜಿಲ್ಲೆಗಳಲ್ಲಿ ವಿಜಯಪುರ ಜಿಲ್ಲೆಯೂ ಒಂದಾಗಿದೆ ಎಂದು ಹೇಳಲಾಗ್ತಿದೆ. ಈ ಹಿನ್ನೆಲೆಯಲ್ಲಿ ಸಮಾವೇಶಕ್ಕೆ ಜಿಲ್ಲಾಡಳಿತದಿಂದ ಒಪ್ಪಿಗೆ ಸಿಗುವುದು ಅನುಮಾನವೆಂದು ಕೆಲ ಮೂಲಗಳಿಂದ ತಿಳಿದು ಬಂದಿದೆ.

ಸರ್ಕಾರದ ನಿಯಮದ ಪ್ರಕಾರ 500 ಜನರಿಗಿಂತ ಹೆಚ್ಚಿಗೆ ಸೇರಿಸುವಂತಿಲ್ಲವೆಂದು ಅಧಿಕಾರಿಗಳು ಕಾಂಗ್ರೆಸ್ ಮುಖಂಡರಿಗೆ ಹೇಳಿದ್ದಾರಂತೆ. ಹೀಗಾಗಿ ಮಾರ್ಚ್ 19ರ ಬೃಹತ್ ಸಮಾವೇಶ ರದ್ದಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಬುಧವಾರ ಜಿಲ್ಲಾಧಿಕಾರಿ ಮಟ್ಟದಲ್ಲಿ ಸಭೆ ನಡೆಯುತ್ತಿದ್ದು, ಸಭೆಯ ಬಳಿಕ ಸ್ಪಷ್ಟವಾದ ಮಾಹಿತಿ ಸಿಗಲಿದೆ. ಒಂದು ವೇಳೆ ಅನುಮತಿ ಸಿಗದೆ ಹೋದ್ರೆ ರಾಜಕೀಯ ತಿರುವು ಪಡೆದುಕೊಳ್ಳುವ ಸಾಧ್ಯತೆಯಿದೆ.




Leave a Reply

Your email address will not be published. Required fields are marked *

error: Content is protected !!