ಪ್ರಜಾಸ್ತ್ರ ಸುದ್ದಿ
ವಿಜಯಪುರ: ಕಳೆದ ಬಾರಿಯ 2018ರ ಚುನಾವಣೆಯಲ್ಲಿ ಕೊನೆಯ ಚುನಾವಣೆ ಅನ್ನೋ ಅನುಕಂಪದಿಂದ ಎಂ.ಸಿ ಮನಗೂಳಿ ಸಿಂದಗಿಯಲ್ಲಿ ಗೆದ್ದಿದ್ದರು ಎಂದು ಗಣಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್ ಹೇಳಿದ್ದಾರೆ.
ಕಳೆದ ಬಾರಿ ಭಾವನಾತ್ಮಕವಾಗಿ ಮಾತನಾಡಿ ಮನಗೂಳಿ ಗೆದ್ದಿದ್ದು. ಈ ಬಾರಿ ಬಿಜೆಪಿ ಗೆಲುವು ಸಾಧಿಸಲಿದೆ. ಬಿಜೆಪಿಯ ಜನಪರ ಕಾರ್ಯಕ್ರಮ, ಯೋಜನೆಗಳಿಂದಾಗಿ ಹಾನಗಲ್ ಹಾಗೂ ಸಿಂದಗಿಯಲ್ಲಿ ಮತ ನೀಡುತ್ತಾರೆ. ಮುಂದಿನ ಚುನಾವಣೆಯಲ್ಲೂ ಬಿಜೆಪಿ ಆಡಳಿತದ ಚುಕ್ಕಾಣಿ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.