ಪ್ರಜಾಸ್ತ್ರ ಸುದ್ದಿ
ಸಿಂದಗಿ: ವಿಧಾನಸಭೆ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ತಮ್ಮ ಉಮೇದುವಾರಿಕೆಯನ್ನು ಕೊನೆಯ ದಿನವಾದ ಶುಕ್ರವಾರ ಸಲ್ಲಿಕೆ ಮಾಡಿದರು.
ಈ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ, ಮಾಜಿ ಸಚಿವ ಎಂ.ಬಿ ಪಾಟೀಲ ಸೇರಿದಂತೆ ಇತರರು ಭಾಗವಹಿಸಿದ್ದರು.
ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಎಂ.ಸಿ ಮನಗೂಳಿ ಅವರ ನಿಧನದಿಂದಾಗಿ ಅನಿವಾರ್ಯ ಕಾರಣಕ್ಕೆ ಚುನಾವಣೆ ಎದುರಾಗಿದೆ. ಅವರ ನಿಧನವಾಗುವುದಕ್ಕೂ ಮೊದಲು ಡಿ.ಕೆ ಶಿವಕುಮಾರ ಹಾಗೂ ನನ್ನನ್ನು ಭೇಟಿಯಾಗಿ, ನನ್ನ ಮಗ ಅಶೋಕ ಮನಗೂಳಿಯನ್ನು ನೀವು ನೋಡಿಕೊಳ್ಳಬೇಕು ಎಂದಿದ್ದರು. ಅದರಂತೆ ಅಶೋಕ ಮನಗೂಳಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದು, 25 ಸಾವಿರಕ್ಕೂ ಹೆಚ್ಚು ಮಾತಗಳಿಂದ ಗೆಲ್ಲುತ್ತಾರೆ ಎಂದರು.