ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ವಿಜಯಪುರ ಜಿಲ್ಲೆ ಸಿಂದಗಿ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣದ ಆರೋಪಿ, ಭಾನುವಾರ ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾನೆ. ಈ ಘಟನೆ ಹಲವು ತಿರುವುಗಳನ್ನ ಪಡೆದುಕೊಂಡಿದೆ.
ಈ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಸೋಷಿಯಲ್ ಮೀಡಿಯಾ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಅವರು ಏನು ಹೇಳಿದ್ದಾರೆ ಅನ್ನೋದು ಇಲ್ಲಿದೆ ನೋಡಿ.
ವಿಜಾಪುರ ಜಿಲ್ಲೆಯ ಸಿಂದಗಿ ಪೋಲಿಸ್ ಸ್ಟೇಷನ್ ನಲ್ಲಿ ನಡೆದ ಲಾಕ್ ಅಪ್ ಡೆತ್ ಘಟನೆ ಕುರಿತು ಸಿ.ಐ.ಡಿ ತನಿಖೆ ಮಾಡಲಿದ್ದು, ಕಾನೂನು ಪ್ರಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು. ತನಿಖೆ ನಡೆಸಲು ಸಿ.ಐ.ಡಿ ಪೊಲೀಸರು ಸಿಂದಗಿಗೆ ತೆರಳಿದ್ದು, ಘಟನೆ ಕುರಿತು ತನಿಖೆ ನಡೆಸಿ ವರದಿ ನೀಡಲಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.