ಪ್ರಜಾಸ್ತ್ರ ಅಪರಾಧ ಸುದ್ದಿ
ವಿಜಯಪುರ: ಜಿಲ್ಲೆಯ ಸಿಂದಗಿ ತಾಲೂಕಿನ ಬೂದಿಹಾಳ ಪಿ.ಎಚ್ ಗ್ರಾಮದಲ್ಲಿ ಕಳೆದ ಜೂನ್ 6ರಂದು ಅಕ್ಕ ಹಾಗೂ ತಮ್ಮನ ಹತ್ಯೆ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಕಳೆದ ರಾತ್ರಿ ನಾಲ್ವರು ಆರೋಪಿಗಳ ಬಂಧನವಾಗಿದೆ.
ಶಂಕರಗೌಡ ಬಿರಾದಾರ, ಅಪ್ಪಾಸಾಹೇಬ ಬಿರಾದಾರ, ಸಂಗಣ್ಣ ಬಿರಾದಾರ, ಮಂಜುನಾಥ ಬಿರಾದಾರ ಬಂಧಿತ ಆರೋಪಿಗಳಾಗಿದ್ದಾರೆ. ಜೂನ್ 6ರಂದು ಮಕ್ಕಳ ಟಿಸಿ ತರಲು ಬಂದಿದ್ದ ರಾಜಶ್ರೀ ಹಾಗೂ ಸಹೋದರ ನಾನಾಗೌಡನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ.
ಈ ಸಂಬಂಧ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಪತ್ತೆಯಾಗಿ ಮೂರು ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆನಂದಕುಮಾರ್ ಹೇಳಿದ್ದರು. ಇದೀಗ ಆರೋಪಿಗಳ ಬಂಧನವಾಗಿದೆ.