ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಉಪ ಚುನಾವಣೆಯಲ್ಲಿ ಬಿಜೆಪಿ ಈಗಾಗ್ಲೇ ಗೆದ್ದಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ, ಮುಖ್ಯಮಂತ್ರಿಗಳೇ ಫಲಿತಾಂಶ ಹೇಳಿದ್ಮೇಲೆ ಇನ್ನೇನು ಮಾಡಲು ಸಾಧ್ಯ. ಅಧಿಕಾರ ಇದೆಯಲ್ಲ ದೊಡ್ಡ ಮಾತುಗಳನ್ನಾಡುತ್ತಾರೆ. ನಾವು ಚಿಕ್ಕವರಾಗಿ ಅವರ ಮಾತುಗಳನ್ನು ಕೇಳಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.
ಉಪ ಚುನಾವಣೆಯಲ್ಲಿ ಸಿಎಂ ಹಿಡಿದ ಸಚಿವರೆಲ್ಲ ಸಿಂದಗಿ, ಹಾನಗಲ್ ನಲ್ಲೇ ಬೀಡು ಬಿಟ್ಟಿದ್ದಾರೆ. ಹೀಗಾಗಿ ವಿಧಾನಸೌಧಕ್ಕೆ ಬೀಗ ಹಾಕಲಾಗಿದೆ. ಅಲ್ಲಿ ಕಚೇರಿಗೆ ಹೋದರೆ ಯಾವ ಸಚಿವರು ಸಿಗುವುದಿಲ್ಲ. ಇದರಿಂದಾಗಿ ಜನರು ಸಂಕಷ್ಟು ಎದುರಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.