ಪ್ರಜಾಸ್ತ್ರ ಸುದ್ದಿ
ಸಿಂದಗಿ: 2023ನೇ ವಿಧಾನಸಭಾ ಚುನಾವಣೆಯ ತಾಲೂಕಿನ ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ ಸೋಮಜಾಳ(52) ಶುಕ್ರವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರ ನಿಧನ ಇಡೀ ತಾಲೂಕಿನ ಜನತೆಗೆ ಶಾಕ್ ನೀಡಿದೆ.
ಜನವರಿ 19ರಂದು ಪಟ್ಟಣದಲ್ಲಿ ಜೆಡಿಎಸ್ ನ ಪಂಚರತ್ನ ಯಾತ್ರೆಯ ಸಮಾವೇಶ ನಡೆಸಿದ್ದರು. ಈ ವೇಳೆ ಕುಮಾರಸ್ವಾಮಿ ಭಾಗವಹಿಸಿದ್ದರು.
ಶುಕ್ರವಾರ ನಾಗಠಾಣ ಮತಕ್ಷೇತ್ರದಲ್ಲಿ ಪಂಚರತ್ನ ಯಾತ್ರೆಯ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಪತ್ನಿ ವಿಶಾಲಾಕ್ಷಿ, ಓರ್ವ ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.