ಪ್ರಜಾಸ್ತ್ರ ಸುದ್ದಿ
ಸಿಂದಗಿ: ಪಟ್ಟಣದಲ್ಲಿನ ಕಸದ ಬಗ್ಗೆ ಸಾರ್ವಜನಿಕರು ಎಷ್ಟೇ ಹೇಳಿದರೂ ಪುರಸಭೆ ಅಧಿಕಾರಿಗಳು ಕ್ಯಾರೆ ಅಂತಿಲ್ಲ. ಹೀಗಾಗಿ ಪಟ್ಟಣದ ಪ್ರಮುಖ ರಸ್ತೆಗಳು ಕಸದರಾಶಿಯಿಂದು ತುಂಬಿಕೊಂಡು ದುರ್ನಾತ ಬೀರುತ್ತಿವೆ. ಅದರಲ್ಲಿ ವಿವೇಕಾನಂದ ಸರ್ಕಲ್ ಬಳಿಯಿರುವ ಟಿಸಿಯು ಒಂದಾಗಿದೆ.
ಇಲ್ಲಿನ ಕಸವನ್ನು ಸ್ವಚ್ಚಗೊಳಿಸುವಂತೆ ಸುತ್ತಲಿನ ಅಂಗಡಿಕಾರರು ಹೇಳಿದರೆ, ಅಧಿಕಾರಿಗಳು ಹೇಳಿದರೆ ಮಾತ್ರ ನಾವು ಸ್ವಚ್ಛ ಮಾಡುತ್ತೇವೆ ಎಂದು ಪುರಸಭೆ ಸಿಬ್ಬಂದಿ ಹೇಳುತ್ತಿದ್ದಾರಂತೆ. ಇದಕ್ಕೂ ತಮಗೂ ಸಂಬಂಧ ಇಲ್ಲದಂತೆ ವರ್ತಿಸುತ್ತಿರುವ ಸಿಬ್ಬಂದಿ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಸ್ವಂತ ಖರ್ಚಿನಲ್ಲಿ ಇಲ್ಲಿನ ಕಸವನ್ನು ಸ್ವಚ್ಚಗೊಳಿಸುವ ಕೆಲಸ ಮಾಡುತ್ತಿದ್ದಾರೆ. ಈ ಬಗ್ಗೆ ಮೇಲಾಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.