ಪ್ರಜಾಸ್ತ್ರ ಸುದ್ದಿ
ಸಿಂದಗಿ: ವಿಜಯಪುರ ಸಂಸದ ರಮೇಶ ಜಿಗಜಿಣಗಿ ಅವರ ವಿರುದ್ಧ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಲಾದ ವಿಚಾರಕ್ಕೆ ಸಂಬಂಧಿಸಿದಂತೆ, ಸಿಂದಗಿ ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ಅವರು ಅವಾಚ್ಯವಾಗಿ ಕಾಮೆಂಟ್ ಮಾಡಿದ್ದು, ಇದಕ್ಕೆ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ತಾಲೂಕು ಮಂಡಳ ಆಗ್ರಹಿಸಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ತಾಲೂಕು ಮಂಡಳ ಅಧ್ಯಕ್ಷ ಈರಣ್ಣ ರಾವೂರ, ತಂದೆಯ ಸ್ಥಾನದಲ್ಲಿರುವ ಲೋಕಸಭಾ ಸದಸ್ಯರಾದ ರಮೇಶ ಜಿಗಜಿಣಗಿ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ದದಿಂದ ನಿಂದಿಸಿದ್ದು ತೀರಾ ವಿಷಾದನೀಯ ಸಂಗತಿ ಎಂದಿದ್ದಾರೆ.
ಸಂಸದ ರಮೇಶ ಜಿಗಜಿಣಗಿ ಅವರಿಗೆ ಅವಾಚ್ಯವಾಗಿ ನಿಂದಿಸಿದ್ದಕ್ಕಾಗಿ ಕೂಡಲೇ ಕ್ಷಮೆಯಾಚಿಸಬೇಕು. ಇಲ್ಲದಿದ್ದಲ್ಲಿ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಡಾ.ಶಾಂತವೀರ ಮನಗೂಳಿ ಅವರು ರಾಜೇನಾಮೆ ನೀಡಬೇಕು. ಕ್ಷಮೆಯಾಚನೆ ಮಾಡದೆ ಹೋದರೆ ಬಿಜೆಪಿ ಸಿಂದಗಿ ಮಂಡಲ ವತಿಯಿಂದ ಪುರಸಭೆ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.