ಪ್ರಜಾಸ್ತ್ರ ಅಪರಾಧ ಸುದ್ದಿಸುದ್ದಿ
ವಿಜಯಪುರ: ಜಿಲ್ಲೆಯ ಸಿಂದಗಿ ಪಟ್ಣದಲ್ಲಿ ಕಳೆದ ತಡರತ್ರಿ ನಡೆದ ಆಟೋ ಚಾಲಕನ ಕೊಲೆ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಸಿಂದಗಿ ಠಾಣೆ ಪೊಲೀಸರು ಆರೋಪಿಗಳನ್ನು 24 ಗಂಟೆಯ ಒಳಗೆ ಬಂಧಿಸಿದ್ದಾರೆ.
ನೂರ್ಅಹ್ಮದ್ ಬುಡ್ಡೆಸಾಬ್ ನಾಯಿಕ್, ಸಮೀರ್ ರಫೀಕ್ ನಾಯಿಕ್ ಬಂಧಿತ ಆರೋಪಿಗಳು. ಹಣಕಾಸಿನ ವಿಚಾರಕ್ಕೆ ಆಟೋ ಚಾಲಕ ತೌಫಿಕ್ ಮೆಹಬೂಬ್ ಚಿನಿವಾರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಜಿಲ್ಲೆಯ ಸಿಂದಗಿ-ಜೇವರ್ಗಿ ಬೈಪಾಸ್ ಬಳಿ ಹತ್ಯೆಗೈದಿದ್ದರು. ಸಿಂದಗಿ ಪಿಎಸ್ಐ ನಿಂಗಪ್ಪ ಪೂಜಾರಿ ಹಾಗೂ ತಂಡ 24 ಘಂಟೆಗಳ ಒಳಗೆ ಆರೋಪಿಗಳ ಬಂಧಿಸಿ ಜಿಲ್ಲೆಯ ದರ್ಗಾ ಜೈಲಿಗೆ ಕಳುಹಿಸಿಕೊಟ್ಟಿದ್ದಾರೆ. ಈ ಕುರಿತು ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.