ಸಿಂದಗಿ: ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಜನತೆ ಎದುರಿಸ್ತಿರುವ ಕುಡಿಯುವ ನೀರಿನ ಸಮಸ್ಯೆಯನ್ನ ಬಗೆಹರಿಸುವಂತೆ, ಸಿಂದಗಿ ನಗರ ಸುಧಾರಣಾ ವೇದಿಕೆ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿತು.
ಕಳೆದ ಐದಾರು ತಿಂಗಳುಗಳಿಂದ ಸಿಂದಗಿ ನಗರದ ಜನತೆ ಕುಡಿಯುವ ನೀರಿಗಾಗಿ ಸಾಕಷ್ಟು ತೊಂದರೆ ಅನುಭವಿಸ್ತಿದೆ. ಈ ಬಗ್ಗೆ ಪುರಸಭೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ರೂ ಯಾವುದೇ ಪ್ರಯೋಜನವಾಗಿಲ್ಲ. ಇದ್ರಿಂದಾಗಿ ನಗರದ 23 ವಾರ್ಡ್ ಗಳ ಜನರು ತತ್ತರಿಸಿ ಹೋಗಿದ್ದಾರೆ. ಹೀಗಾಗಿ ಆದಷ್ಟು ಬೇಗ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಅಂತಾ ಹೇಳಿ ತಹಶೀಲ್ದಾರ್ ಕಡಕಭಾವಿ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಇದರ ಜೊತೆಗೆ ರಸ್ತೆ ಸುಧಾರಣೆ, ಕಸ ವಿಲೇವಾರಿ, ಚರಂಡಿ ದುರಸ್ಥಿ ಕಾರ್ಯ ಸೇರಿದಂತೆ ಮೂಲಭೂತ ಸೌಕರ್ಯಗಳನ್ನ ಆದಷ್ಟು ಬೇಗ ಒದಗಿಸಿಕೊಡಬೇಕೆಂದು ಒತ್ತಾಯಿಸಲಾಯ್ತು. ಈ ಕುರಿತು ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ, ಇಂಡಿ ಹಾಗೂ ಸಿಂದಗಿ ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ.