ವಿವಿಧ ಬೇಡಿಕೆಗಳಿಗಾಗಿ ಹಡಪದ ಸಮಾಜದಿಂದ ಮನವಿ

427

ಸಿಂದಗಿ: ಸಿಂದಗಿ ತಾಲೂಕು ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ವತಿಯಿಂದ ವಿವಿಧ ಬೇಡಿಕೆಗಳ ಕುರಿತು ಶಾಸಕ ಎಂ.ಸಿ ಮನಗೂಳಿ ಅವರಿಗೆ ಮನವಿ ಸಲ್ಲಿಸಲಾಯ್ತು. ರಾಜ್ಯದಲ್ಲಿ 25 ಲಕ್ಷ ಜನಸಂಖ್ಯೆಯನ್ನ ಹಡಪದ ಸಮಾಜ ಹೊಂದಿದೆ. ಆದ್ರೆ, ರಾಜಕೀಯವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿದೆ. ಹೀಗಾಗಿ ನಮ್ಮ ಪರ ವಿಧಾನಸೌಧದಲ್ಲಿ ಧ್ವನಿ ಎತ್ತಬೇಕೆಂದು ಶಾಸಕರಲ್ಲಿ ಮನವಿ ಮಾಡಿಕೊಳ್ಳಲಾಯ್ತು.

ಹಡಪದ ಸಮಾಜದ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪನೆ, ನಿಷೇಧಿಸಿರುವ ಹಜಾಮ ಪದ ಬಳಕೆ ಮಾಡುವವರ ವಿರುದ್ಧ ಜಾತಿ ನಿಂದನೆ ಕೇಸ್ ಹಾಕುವುದು ಸೇರಿದಂತೆ ಕೆಲ ಪ್ರಮುಖ ಬೇಡಿಕೆಗಳ ಕುರಿತು ಮನವಿ ಸಲ್ಲಿಸಿದ್ದಾರೆ. ಈ ವೇಳೆ ಸಿಂದಗಿ ತಾಲೂಕು ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ಅಧ್ಯಕ್ಷ ಮಾಂತೇಶ ಮೂಲಿಮನಿ, ಉಪಾಧ್ಯಕ್ಷ ಮಂಜುನಾಥ ಹಡಪದ, ಹಡಪದ ಅಪ್ಪಣ್ಣ ವಿ ವಿ ಸಂಘದ ಅಧ್ಯಕ್ಷ ಶಿವಾನಂದ ಹಡಪದ, ಕಾರ್ಯದರ್ಶಿ ರಾಮಚಂದ್ರ ಗೊರವಗುಂಡಗಿ, ಯಂಕಂಚಿ ಭಾಗದ ಅಧ್ಯಕ್ಷ ರಾಜು ಯಂಕಂಚಿ, ಶ್ರೀಶೈಲ ಹಡಪದ, ನೀಲಕಂಠ ವಂದಾಲ ಸೇರಿದಂತೆ ಅನೇಕರು ಭಾಗವಹಿಸಿದ್ರು.




Leave a Reply

Your email address will not be published. Required fields are marked *

error: Content is protected !!