ಪ್ರಜಾಸ್ತ್ರ ಸುದ್ದಿ
ಹೈದ್ರಾಬಾದ್: ಟಿಆರ್ ಎಸ್ ಶಾಸಕರ ಖರೀದಿ ಪ್ರಕರಣ ಸಂಬಂಧ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸತೋಷಗೆ ಹೊಸ ನೋಟಿಸ್ ಜಾರಿ ಮಾಡಿ ಎಂದು ತೆಲಂಗಾಣ ಹೈಕೋರ್ಟ್ ಎಸ್ಐಟಿಗೆ ಗುರುವಾರ ಸೂಚಿಸಿದೆ.
ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿಜಯಸೇನ್ ರೆಡ್ಡಿ ನೇತೃತ್ವದ ಏಕಸದಸ್ಯಪೀಠ, ಎಜಿ(ಅಡ್ವೊಕೇಟ್ ಜನರಲ್) ಬಿ.ಎಸ್ ಪ್ರಸಾದ್ ಅವರಿಗೆ ಪ್ರತಿ ಅಫಿಡವಿಟ್ ಸಲ್ಲಿಸುವಂತೆ ಸೂಚಿಸಿದೆ. ವಿಚಾರಣೆಗೆ ಬಿ.ಎಸ್ ಸಂತೋಷ್ ಹಾಜರಾಗಿಲ್ಲ ಎಂದು ತಿಳಿಸಿದರು.
ಹೆಚ್ಚುವರಿ ಅಡ್ವೊಕೇಟ್ ಜನರಲ್ ರಾಮಚಂದ್ರ ರಾವ್, ದೆಹಲಿಗೆ ಬಿಜೆಪಿ ಕಚೇರಿಗೆ ನೋಟಿಸ್ ಕಳುಹಿಸಲಾಗಿದೆ. ದೆಹಲಿ ಪೊಲೀಸರ ಪ್ರಯತ್ನಗಳ ಹೊರತಾಗಿಯೂ ಆರೋಪಿ ಬಿ.ಎಲ್ ಸಂತೋಷ್ ವಿಚಾರಣೆಗೆ ಹಾಜರಾಗಿಲ್ಲ. ಎಲೆಕ್ಟ್ರಾನಿಕ್ ಸಾಕ್ಷಿಗಳನ್ನು ನಾಶಪಡಿಸಲು ಉದ್ದೇಶಪೂರ್ವಕವಾಗಿ ಎಸ್ಐಟಿ ಮುಂದೆ ಹಾಜರಾಗುತ್ತಿಲ್ಲವೆಂದು ಕೋರ್ಟ್ ಗಮನಕ್ಕೆ ತಂದರು.