ಪ್ರಜಾಸ್ತ್ರ ಸುದ್ದಿ
ಹೈದ್ರಾಬಾದ್: ಭಾರತ ರಾಷ್ಟ್ರ ಸಮಿತಿ ಶಾಸಕರ ಖರೀದಿ ಹಗರಣ ಸಂಬಂಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸತೋಷ್ ಅವರಿಗೆ ನೋಟಿಸ್ ನೀಡಿದೆ. ನವೆಂಬರ್ 21ರಂದು ಪೊಲೀಸರ ಮುಂದೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.
ಬಿಆರ್ ಎಸ್ ಪಕ್ಷದ ಶಾಸಕರನ್ನು ಬಿಜೆಪಿ ಖರೀದಿಸಲು ಮುಂದಾಗಿದೆ ಎಂದು ಆರೋಪ ಕೇಳಿ ಬಂದಿತು. ಕೆಲವೊಂದಿಷ್ಟು ವಿಡಿಯೋಗಳು ಹರಿದಾಡಿದವು. ಹೀಗಾಗಿ ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್, ಇದರ ತನಿಖೆಗಾಗಿ 7 ಸದಸ್ಯರ ತನಿಖಾ ತಂಡ ರಚನೆ ಮಾಡಿದರು.
ಸೆಕ್ಷನ್ 41(ಎ) ಅಡಿಯಲ್ಲಿ ಬಿ.ಎಲ್ ಸಂತೋಷ್ ಅವರಿಗೆ ನೋಟಿಸ್ ನೀಡಲಾಗಿದೆ. ಹೇಳಿದ ದಿನಾಂಕ, ಸಮಯದಿಂದ ಪೊಲೀಸರ ಎದುರು ಹಾಜರಾಗದೆ ಹೋದರೆ ಬಂಧಿಸಲಾಗುವುದು ಎಂದು ತಿಳಿಸಲಾಗಿದೆ.