ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಕನ್ನಡದ ಖ್ಯಾತ ಹಿರಿಯ ಕಾದಂಬರಿಕಾರ ಎಸ್.ಎಲ್ ಭೈರಪ್ಪನವರ ಪರ್ವ ಕಾದಂಬರಿಯನ್ನು ಸಿನಿಮಾ ಮಾಡಲು ನಿರ್ದೇಶಕ ವಿವೇಕ್ ಅಗ್ನಿಹೋತ್ರ ಮುಂದಾಗಿದ್ದಾರೆ. ಇಂದು ಸಿನಿಮಾದ ಟೈಟಲ್ ಲಾಂಚ್ ಮಾಡಲಾಗಿದೆ.
ನಟ ಪ್ರಕಾಶ್ ಬೆಳವಾಡಿ ಪರ್ವ ಕಾದಂಬರಿಯನ್ನು ನಾಟಕ ಮಾಡಿದ್ದಾರೆ. ಇದೀಗ ಸಿನಿಮಾ ಮಾಡಲಾಗುತ್ತಿದೆ. ಇದರಲ್ಲಿ ರಾಕಿಂಗ್ ಸ್ಟಾರ್ ಯಶ್, ಪ್ರಕಾಶ ಬೆಳವಾಡಿ, ನಟಿ ಪಲ್ಲವಿ ಜೋಶಿ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಐತಿಹಾಸಿಕ ಕಥೆಯನ್ನು ಹೊಂದಿರುವ ಕಾದಂಬರಿಯನ್ನು ಮೊದಲು ಹಿಂದಿ, ಕನ್ನಡದಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ನಂತರ ಇಂಗ್ಲೆಷ್ ಆಗೂ ಸ್ಪ್ಯಾನಿಶ್ ಭಾಷೆಯಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಚಿತ್ರತಂಡ ತಿಳಿಸಿದೆ.