ಪ್ರಜಾಸ್ತ್ರ ಸುದ್ದಿ
ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಮಗಳು ಜೋಶ್ ಇರಾನಿ ಗೋವಾದಲ್ಲಿ ಅಕ್ರಮವಾಗಿ ಬಾರ್ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಗಂಭೀರವಾಗಿ ಆರೋಪಿಸಿದೆ. ಅಲ್ಲದೇ ಕೆಲ ಬಿಜೆಪಿ ಸದಸ್ಯರು ಈ ಬಾರ್ ಮಾಲೀಕರು ತುಳಸಿ ಜೀ ಅವರ ಮಗಳದಲ್ಲವೆಂದು ನಾಚಿಕೆಯಿಲ್ಲದೆ ಹೇಳುತ್ತಿದ್ದಾರೆ. ಅವರಿಗಾಗಿ ಈ ವಿಡಿಯೋ ಎಂದು ಬರೆದಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ರಾಷ್ಟ್ರೀಯ ಯುವ ಘಟಕದ ಅಧ್ಯಕ್ಷ ಶ್ರೀನಿವಾಸ್ ಬಿ.ವಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಕೆಲ ಬಿಜೆಪಿ ಸದಸ್ಯರು ಈ ಬಾರ್ ಮಾಲೀಕರು ತುಳಸಿ ಜೀ ಅವರ ಮಗಳದಲ್ಲವೆಂದು ನಾಚಿಕೆಯಿಲ್ಲದೆ ಹೇಳುತ್ತಿದ್ದಾರೆ. ಅವರಿಗಾಗಿ ಈ ವಿಡಿಯೋ ಎಂದು ಬರೆದಿದ್ದಾರೆ.
ಸಚಿವೆ ಸ್ಮೃತಿ ಇರಾನಿ ಮಗಳು ಜೋಶ್ ಇರಾನಿ, ನಕಲಿ ಹಾಗೂ ಮೋಸದ ದಾಖಲೆಗಳನ್ನು ಸೃಷ್ಟಿಸಿ ರೆಸ್ಟೋರೆಂಟ್ ನಡೆಸುತ್ತಿದ್ದಾರೆ ಎಂದು ವಕೀಲ ಹಾಗೂ ಸಾಮಾಜಿಕ ಹೋರಾಟಗಾರ ಐರಿಸ್ ರೋಡ್ರಿಗಸ್ ದೂರು ನೀಡಿದ ನಂತರ, ಗೋವಾ ಅಬಕಾರಿ ಆಯುಕ್ತರು ಜುಲೈ 21ರಂದು ರೆಸ್ಟೋರೆಂಟ್ ಗೆ ಶೋಕಾಸ್ ನೋಟಿಸ್ ನೀಡಿದ್ದಾರೆ. ನೋಟಿಸ್ ನೀಡಿದ ಅಬಕಾರಿ ಆಯುಕ್ತರನ್ನು ವರ್ಗಾವಣೆ ಮಾಡಲು ಬಿಜೆಪಿ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿರುವ ಸಚಿವೆ ಇರಾನಿ, ನನ್ನ ಮಗಳು ವಿದ್ಯಾರ್ಥಿನಿಯಾಗಿದ್ದಾಳೆ. ಕಾಂಗ್ರೆಸ್ ವಿರುದ್ಧ ಮಾತನಾಡಿದ್ದಕ್ಕೆ ಈ ರೀತಿ ಆರೋಪ ಮಾಡುತ್ತಿದ್ದಾರೆ. ಅವರನ್ನು ಕೋರ್ಟ್ ನಲ್ಲಿ ಭೇಟಿಯಾಗುತ್ತೇನೆ ಎಂದಿದ್ದಾರೆ.