ಪ್ರಜಾಸ್ತ್ರ ಸುದ್ದಿ
ಮಂಡ್ಯ: ಕನ್ಯಾಕುಮಾರಿಯಿಂದ ಕಾಶ್ಮೀರದ ತನಕ ಕಾಂಗ್ರೆಸ್ ವತಿಯಿಂದ ಭಾರತ ಐಕ್ಯತಾ ಪಾದಯಾತ್ರೆ ನಡೆಸಲಾಗುತ್ತಿದೆ. ದಸರಾ ಹಬ್ಬದ ಪ್ರಯುಕ್ತ ಎರಡು ದಿನಗಳ ಕಾಲ ನಡಿಗೆಗೆ ವಿರಾಮ ನೀಡಲಾಗಿತ್ತು. ಇಂದಿನಿಂದ ಮತ್ತೆ ನಡಿಗೆ ಶುರುವಾಗಿದೆ.
ಮಂಡ್ಯದಲ್ಲಿ ಪಾದಯಾತ್ರೆಗೆ ವಿರಾಮ ನೀಡಲಾಗಿತ್ತು. ಅಲ್ಲಿಂದೇ ಶುರು ಮಾಡಲಾಗಿದ್ದು, ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ, ಮಗನೊಂದಿಗೆ ಹೆಜ್ಜೆ ಹಾಕುತ್ತಿದ್ದಾರೆ. ಈ ವೇಳೆ ರಾಜ್ಯ ಹಾಗೂ ಕೇಂದ್ರದ ಕಾಂಗ್ರೆಸ್ ನಾಯಕರು ಭಾಗವಹಿಸಿದ್ದಾರೆ. ಪಾಂಡವಪುರದ ಬೆಳ್ಳಾಲೆ ಗ್ರಾಮದಿಂದ ಯಾತ್ರೆ ಶುರುವಾಗಿದೆ.