ನವದೆಹಲಿ: ಕಾಂಗ್ರೆಸ್ ಆಡಳಿತವಿರುವ ರಾಜ್ಯದ ಸಿಎಂಗಳಿಗೆ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಪತ್ರ ಬರೆಯುವ ಮೂಲಕ, ಕರೋನಾ ವೈರಸ್ ಬಗ್ಗೆ ಮುಂಜಾಗ್ರತೆ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಕರೋನಾ ವೈರಸ್ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಇದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದಿದ್ದಾರೆ.
ಜಗತ್ತಿನಾದ್ಯಂತ ಕೋವಿಡ್-19 ಬಗ್ಗೆ ತುರ್ತು ಪರಿಸ್ಥಿತಿ ತೆಗೆದುಕೊಳ್ಳಲಾಗಿದೆ. ಇದ್ರಿಂದಾಗಿ ಕಾಂಗ್ರೆಸ್ ಆಡಳಿತವಿರುವ ರಾಜ್ಯದ ಸಿಎಂಗಳಿಗೆ ಪತ್ರ ಬರೆದು, ಜನರಲ್ಲಿ ತಿಳುವಳಿಕೆ ಮೂಡಿಸಿ ಮುಂಜಾಗ್ರತ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಅಲ್ದೇ ಚಿಕಿತ್ಸಾ ಘಟಕಗಳನ್ನ ಹೆಚ್ಚಿಸಿ ಎಂದು ಸಲಹೆ ನೀಡಿದ್ದಾರೆ.