ಪ್ರಜಾಸ್ತ್ರ ಸುದ್ದಿ
ನವದೆಹಲಿ: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸ್ಪರ್ಧಿಸುತ್ತಿದ್ದಾರೆ. ಇಂದು ನಾಮಪತ್ರ ಸಲ್ಲಿಸುವ ಮೂಲಕ ಕಣಕ್ಕೆ ಇಳಿದಿದ್ದಾರೆ. ಜೈಪುರಕ್ಕೆ ಬಂದಿಳಿದ ಅವರನ್ನು ಕಾಂಗ್ರೆಸ್ ಮಾಜಿ ಸಿಎಂ ಅಶೋಕ್ ಗೆಹಲೋತ್ ಸ್ವಾಗತಿಸಿದರು.
ಮಧ್ಯಪ್ರದೇಶ, ರಾಜಸ್ಥಾನ, ಹಿಮಾಚಲ ಪ್ರದೇಶದಿಂದ ಸ್ಪರ್ಧಿಸಲು ನಾಯಕರು ಕೇಳಿಕೊಂಡಿದ್ದರು. ಅಂತಿಮವಾಗಿ ರಾಜಸ್ಥಾನ ಆಯ್ಕೆ ಮಾಡಿಕೊಂಡ ಸೋನಿಯಾ ಗಾಂಧಿ, ಇಂದು ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಪುತ್ರ, ಸಂಸದ ರಾಹುಲ್ ಗಾಂಧಿ, ಪುತ್ರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಸೇರಿ ಇತರರು ಉಪಸ್ಥಿತರಿದ್ದರು.
ಫೆಬ್ರವರಿ 15 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಫೆಬ್ರವರಿ 27ರಂದು ಚುನಾವಣೆ ನಡೆಯಲಿದೆ.