ಪ್ರಜಾಸ್ತ್ರ ಸುದ್ದಿ
ಹುಬ್ಬಳ್ಳಿ: ಮಗಳ ಸಾವಿನ ಪ್ರಕರಣದ ತನಿಖೆ ದಿಕ್ಕು ತಪ್ಪುತ್ತಿದೆ ಎಂದು ಹೇಳಿದ್ದ ನೇಹಾ ಹಿರೇಮಠ ತಂದೆ ನಿರಂಜನ್ ಇಂದು ನನ್ನಿಂದ ತಪ್ಪಾಗಿದೆ ಕ್ಷಮಿಸಿ ಎಂದಿದ್ದಾರೆ. ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಹಿತಿ ಕೊರತೆಯಿಂದಾಗಿ ತನಿಖೆಯ ದಿಕ್ಕು ತಪ್ಪುತ್ತಿದೆ ಅಂತಾ ಸರ್ಕಾರ ಹಾಗೂ ಪೊಲೀಸ್ ಕಮಿಷನರ್ ವಿರುದ್ಧ ಮಾತನಾಡಿದೆ ಎಂದಿದ್ದಾರೆ.
ನಮ್ಮ ಪಕ್ಷದವರು ತೆರೆಮರೆಯಲ್ಲಿ ಮಗಳಿಗೆ ನ್ಯಾಯ ಕೊಡಿಸುವ ಕೆಲಸ ಮಾಡುತ್ತಿದ್ದಾರೆ. ಪ್ರಕರಣ ಸಿಐಡಿಗೆ ವಹಿಸುವಲ್ಲಿಯೂ ಅವರ ಪಾತ್ರವಿದೆ. ಮಗಳ ಅಂತ್ಯಕ್ರಿಯೆವರೆಗೂ ನನ್ನ ಜೊತೆಗೆ ಇದ್ದವರು ನಂತರ ಇರಲಿಲ್ಲ. ಹೀಗಾಗಿ ತಪ್ಪಾಗಿ ಭಾವಿಸಿದ್ದೆ. ನಿನ್ನೆ ಪ್ರಕರಣದ ಕುರಿತು ಎಲ್ಲ ಮಾಹಿತಿ ನೀಡಿದ್ದಾರೆ. ನನ್ನಿದಾದ ತಪ್ಪಿಗೆ ಎಲ್ಲರಿಗೂ ಕ್ಷಮೆ ಕೇಳುತ್ತೇನೆ.
ಇಂತಹ ಪ್ರಕರಣಗಳು ನಡೆಯದಂತೆ ವಿಶೇಷ ಕಾನೂನು ರಚಿಸಬೇಕು. ಆ ಕಾನೂನಿಗೆ ನೇಹಾ ಹಿರೇಮಠ ಕಾಯ್ದೆ ಎಂದು ಹೆಸರಿಡಬೇಕು. ಇಂತಹ ಪ್ರಕರಣಗಳು ಎಲ್ಲಿಯೂ ಮರುಕಳಿಸಬಾರದು ಎಂದರು.