ಸೌಜನ್ಯ, ಮಣಿಪುರ ಪ್ರಕರಣ ಖಂಡಿಸಿ ಪ್ರತಿಭಟನೆ

106

ಪ್ರಜಾಸ್ತ್ರ ಸುದ್ದಿ

ಶಿವಮೊಗ್ಗ: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ ಹಾಗೂ ಮಣಿಪುರದಲ್ಲಿ ಬುಡಕಟ್ಟು ಮಹಿಳೆಯರಿಬ್ಬರ ಮೇಲಿನ ಸಾಮೂಹಿಕ ಅತ್ಯಾಚಾರ, ಬೆತ್ತಲೆ ಮೆರವಣಿಗೆ ಖಂಡಿಸಿ ಪ್ರತಿಭಟನೆ ನಡೆಸಲಾಯಿತು.

ಸೋಮವಾರ ವಿಚಾರವಾದಿ ವೇದಿಕೆ, ಕರ್ನಾಟಕ, ಶಿವಮೊಗ್ಗ ಮತ್ತು ಕರ್ನಾಟಕ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ, ಶಿವಮೊಗ್ಗ ಇವುಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಸೌಜನ್ಯ ಅತ್ಯಾಚಾರ, ಹತ್ಯೆ ಹಾಗೂ ಮಣಿಪುರದಲ್ಲಿ ನಡೆಯುತ್ತಿರುವ ಸಂಘರ್ಷ ಮತ್ತು ಅಮಾಯಕ ಮಹಿಳೆಯರ ಮೇಲಿನ ಅತ್ಯಾಚಾರ ಸೇರಿ ಎರಡೂ ಪ್ರಕರಣಗಳ ಬಗ್ಗೆ ಸೂಕ್ತ‌ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಒತ್ತಾಯಿಸಲಾಯಿತು. ಈ ವೇಳೆ ಪ್ರಗತಿಪರ ಸಂಘಟನೆಗಳ, ರೈತ ಸಂಘಟನೆಯ ಮುಖಂಡರುಗಳು ಪ್ರತಿಭಟನೆಯಲ್ಲಿ ಭಾಗವಹಿಸಿ ಪ್ರಕರಣಗಳಿಗೆ‌ ಕಾರಣವಾದ ಸಮಾಜಘಾತುಕ ಶಕ್ತಿಗಳ ವಿರುದ್ಧ ಘೋಷಣೆ ಕೂಗಿದರು. ನಂತರ ಜಿಲ್ಲಾಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.




Leave a Reply

Your email address will not be published. Required fields are marked *

error: Content is protected !!