ಪ್ರಜಾಸ್ತ್ರ ಸುದ್ದಿ
ಮೈಸೂರು: ಧರ್ಮಸ್ಥಳದ ಸೌಜನ್ಯ ಎಂಬ ಅಪ್ರಾಪ್ತೆಯ ಅಪಹರಣ ಮಾಡಿ ಅತ್ಯಾಚಾರ ಎಸಗಿ ಹತ್ಯೆ ಮಾಡಿದ್ದ ಪ್ರಕರಣ ಸಂಬಂಧ, ಇದೀಗ ರಾಜ್ಯವ್ಯಾಪಿ ಪ್ರತಿಭಟನೆಗಳು ನಡೆಯುತ್ತಿವೆ. ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ನಗರದಲ್ಲಿ ಪ್ರತಿಭಟನೆ ನಡೆಸಲಾಗಿದೆ.
ಮರುತನಿಖೆ ಮಾಡಿ ನೈಜ ಅಪರಾಧಿಗಳನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆ ನೀಡಲು ಒತ್ತಾಯಿಸಿ ಮೈಸೂರಿನ ಪ್ರಗತಿಪರ ಒಕ್ಕೂಟ, ಎಡ ಪಕ್ಷಗಳು ಮತ್ತು ಇತರ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಮೈಸೂರಿನ ನಂಜರಾಜ ಬಹದ್ದೂರ್ ಛತ್ರದಿಂದ ಗಾಂಧಿ ವೃತ್ತದವರೆಗೆ ರ್ಯಾಲಿ ನಡೆಯಿತು. ನಂತರ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಲಾಯಿತು. ಈ ಪ್ರಕರಣ ನಿಜವಾದ ಅಪರಾಧಿಗಳಿಗೆ ಶಿಕ್ಷೆಯಾಗಬೇಕು. ಇದರಲ್ಲಿ ಯಾರನ್ನೂ ರಕ್ಷಿಸುವ ಕೆಲಸವಾಗಬಾರದು ಎಂದು ಆಕ್ರೋಶ ವ್ಯಕ್ತಪಡಿಸಲಾಯಿತು.