ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸಚಿವ ಈಶ್ವರಪ್ಪ ವಜಾಕ್ಕೆ ಆಗ್ರಹಿಸಿ ಕಾಂಗ್ರೆಸ್ ಇಂದು ಸಹ ಪ್ರತಿಭಟನೆ ನಡೆಸಿತು. ಕಳೆದ ಐದಾರು ದಿನಗಳಿಂದ ಅಹೋರಾತ್ರಿ ಧರಣಿ ಸಹ ನಡೆಸಲಾಗುತ್ತಿದೆ. ಫೆಬ್ರವರಿ 14ರಿಂದ ಉಭಯ ಸದನಗಳು ಶುರುವಾಗಿದ್ದು, ಸಚಿವ ಈಶ್ವರಪ್ಪ ವಜಾಕ್ಕೆ ಧರಣಿ ನಡೆಯುತ್ತಲೇ ಇದೆ.
ಕಾಂಗ್ರೆಸ್ ಸದಸ್ಯರ ಗದ್ದಲ, ಗಲಾಟೆ ನಡುವೆ ಕೆಲವು ಪ್ರಮುಖ ವಿದೇಯಕಗಳಿಗೆ ಅಂಗೀಕಾರ ನೀಡಲಾಗಿದೆ. ರಾಜ್ಯಪಾಲರ ಭಾಷಣದ ಮೇಲೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸರ್ಕಾರದ ಪರವಾಗಿ ಉತ್ತರಿಸಿದರು. ಇದಾದ ನಂತರ ಸಭಾಪತಿ ವಿಶ್ವವೇಶ್ವರ ಹೆಗಡೆ ಕಾಗೇರಿ ಸದನವನ್ನು ಮಾರ್ಚ್ 4ಕ್ಕೆ ಮುಂದೂಡಿದರು.