ಬೆಂಗಳೂರು: ರಮೇಶಕುಮಾರ ರಾಜೀನಾಮೆಯಿಂದ ತೆರವಾಗಿದ್ದ ಸ್ಪೀಕರ್ ಸ್ಥಾನಕ್ಕೆ ಬಿಜೆಪಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವಿರೋಧ ಆಯ್ಕೆಯಾಗಿದ್ದಾರೆ. ಇಂದು ಅವಿರೋಧವಾಗಿ ಆಯ್ಕೆಯಾದ ಕಾಗೇರಿ ಅವರಿಗೆ ರಾಜಕೀಯ ನೇತರಾರರು ಶುಭ ಕೋರಿದ್ರು.
ವಿಧಾನಸಭೆ ಕಾರ್ಯದರ್ಶಿ ಎಂ.ಕೆ ವಿಶಾಲಾಕ್ಷಿಗೆ ಮಂಗಳವಾರ ನಾಮಪತ್ರ ಸಲ್ಲಿಸಿದ್ರು. ಬಿಜೆಪಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಹೊರತು ಪಡಿಸಿ ಯಾರು ನಾಮಪತ್ರ ಸಲ್ಲಿಸದ ಕಾರಣ, ಅವರನ್ನ ಅವರೋಧವಾಗಿ ಆಯ್ಕೆ ಮಾಡಲಾಯ್ತು. ಈ ಬಗ್ಗೆ ಸದನದಲ್ಲಿ ಹೇಳಲಾಯ್ತು. ಬಳಿಕ ಕಾಗೇರಿ ಸಭಾಧ್ಯಕ್ಷರ ಸ್ಥಾನದಲ್ಲಿ ಕುಳಿತು ಕಾರ್ಯಕಲಾಪ ನಡೆಸಿದ್ರು.