ಪ್ರಜಾಸ್ತ್ರ ಅಂತಾರಾಷ್ಟ್ರೀಯ ಸುದ್ದಿ
ಕೊಲಂಬೊ: ಗೊಟಬಯ ರಾಜಪಕ್ಷೆ ಶ್ರೀಲಂಕಾದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದರಿಂದ ಶುಕ್ರವಾರ ಹಂಗಾಮಿ ಅಧ್ಯಕ್ಷರಾಗಿ ರಾನಿಲ್ ವಿಕ್ರಂಸಿಂಘೆ ಅಧಿಕಾರ ವಹಿಸಿಕೊಂಡರು. ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಜಯಂತ ಜಯಸೂರ್ಯ ಪ್ರತಿಜ್ಞಾವಿಧಿ ಬೋಧಿಸಿದರು.
ಸಿಂಗಾಪುರದಲ್ಲಿರುವ ರಾಜಪಕ್ಷೆ ಈ ಮೇಲ್ ಮೂಲಕ ಸ್ಪೀಕರ್ ಮಹಿಂದಾ ಯಾಪಾ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಜುಲೈ 20ರಂದು ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಹಂಗಾಮಿ ಅಧ್ಯಕ್ಷ ವಿಕ್ರಂಸಿಂಘೆ ಮಾತನಾಡಿ, ನಾನು ಶಾಂತಿಯುತವಾಗಿ ಪ್ರತಿಭಟಿಸುವವರ ಪರವಾಗಿದ್ದೇನೆ. ಹಿಂಸಾತ್ಮಾಕ ಕೃತ್ಯಗಳನ್ನು ಹತ್ತಿಕ್ಕಲು ಸಶಸ್ತ್ರ ಪಡೆಗಳಿಗೆ ಪೂರ್ಣ ಅಧಿಕಾರ ನೀಡಲಾಗಿದೆ ಎಂದಿದ್ದಾರೆ.