ಪ್ರಜಾಸ್ತ್ರ ಸುದ್ದಿ
ಶ್ರೀನಗರ: ನೆರೆಯ ಶ್ರೀಲಂಕಾದ ಆರ್ಥಿಕ ಹಾಗೂ ರಾಜಕೀಯ ಬಿಕ್ಕಟ್ಟು ಭಾರತಕ್ಕೆ ಎಚ್ಚರಿಕೆ ಘಂಟೆ ಎಂದು, ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಟ್ವೀಟ್ ಮೂಲಕ ಹೇಳಿದ್ದಾರೆ.
2014ರಿಂದ ದೇಶದಲ್ಲಿ ಕೋಮು ಉನ್ಮಾದಕ್ಕೆ ತಳ್ಳಲಾಗುತ್ತಿದೆ. ದೇಶದಲ್ಲಿ ಭೀತಿಯನ್ನು ಸೃಷ್ಟಿಸಲಾಗುತ್ತಿದೆ. ಸಾಮಾಜಿಕ ಒಗ್ಗಟ್ಟು ಹಾಗೂ ಆರ್ಥಿಕ ಭದ್ರತೆಗೆ ಭಂಗ ಉಂಟು ಮಾಡುವ ಕೆಲಸ ಮಾಡಲಾಗುತ್ತಿದೆ. ಇದೆ ರೀತಿ ಮಾಡಿದ ಶ್ರೀಲಂಕಾ ತಕ್ಕ ಬೆಲೆ ತೆರುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.