ವಿಜಯಪುರ: ಗಣಿತ ಪರೀಕ್ಷೆಗೆ 926 ವಿದ್ಯಾರ್ಥಿಗಳು ಗೈರು

114

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಮಂಗಳವಾರ ನಡೆದ ಎಸ್ಎಸ್ಎಲ್ ಸಿ ಗಣಿತ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ 926 ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎನ್.ಎಚ್ ನಾಗೂರು ತಿಳಿಸಿದ್ದಾರೆ.

127 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, 40,626 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಇದರಲ್ಲಿ 39,700 ವಿದ್ಯಾರ್ಥಿಗಳು ಹಾಜರಾಗಿದ್ದರು. 926 ವಿದ್ಯಾರ್ಥಿಗಳು ಗೈರಾಗಿದ್ದರು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!