ಎಸ್ಎಸ್ಎಲ್ ಸಿ ಪರೀಕ್ಷೆ: ಕಾಪಿ ಚೀಟಿ ಕೊಡಲು ಹೋದ ಯುವಕ ಸಾವನ್ನಪ್ಪಿದ್ದೇಗೆ?

398

ಪ್ರಜಾಸ್ತ್ರ ಸುದ್ದಿ

ಬಸವನಬಾಗೇವಾಡಿ: ಇಂದು ಎಸ್ಎಸ್ಎಲ್ ಸಿಯ ಗಣಿತ ಪರೀಕ್ಷೆ ನಡೆದಿದೆ. ಈ ವೇಳೆ ಕಾಪಿ ಚೀಟಿ ಕೊಡಲು ಹೋದ ಯುವಕನ ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾನೆ. 19 ವರ್ಷದ ಸಾಗರ ಚಲವಾದಿ ಅನ್ನೋ ಯುವಕ ಸಾವನ್ನಪ್ಪಿದ್ದಾನೆ.

ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಹೂವಿನಹಿಪ್ಪರಗಿಯ ವಿಶ್ವಚೇತನ ಪ್ರೌಢ ಶಾಲೆಯ ಹತ್ತಿರ ಈ ಘಟನೆ ನಡೆದಿದೆ. ಕಾಪಿ ಚೀಟಿ ಕೊಡಲು ಹೋದಾಗ ಪೊಲೀಸರು ಬೆನ್ನು ಹತ್ತಿ ಬಂದಿದ್ದಾರೆ. ಈ ವೇಳೆ ಆತನ ಮೇಲೆ ಹಲ್ಲೆ ಮಾಡಿದಾಗ ಸಾವನ್ನಪ್ಪಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ.

ಇನ್ನು ಸಾಗರ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ. ಹೃದಯಾಘಾತವಾಗಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ರು ಹೇಳ್ತಿದ್ದಾರೆ ಎನ್ನಲಾಗ್ತಿದೆ.  ಹೂವಿನಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಯುವಕನ ಸಾವಿಗೆ ಏನು ಕಾರಣ ಎಂದು ತಿಳಿದು ಬಂದಿಲ್ಲ. ಹೀಗಾಗಿ ಈ ಸಾವು ಸಾಕಷ್ಟು ಅನುಮಾನ ಮೂಡಿಸಿದೆ.




Leave a Reply

Your email address will not be published. Required fields are marked *

error: Content is protected !!