ಕೋವಿಡ್ ನಿಯಂತ್ರಣಕ್ಕೆ ಬಂದ್ರೆ ಮಾತ್ರ ಎಸ್ಎಸ್ಎಲ್ ಸಿ ಪರೀಕ್ಷೆ: ಸಿಎಂ

266

ಪ್ರಜಾಸ್ತ್ರ ಸುದ್ದಿ

ಬೆಳಗಾವಿ: ಕೋವಿಡ್ ನಿಂದಾಗಿ ಈ ಬಾರಿಯ ಪಿಯುಸಿ ಪರೀಕ್ಷೆಯನ್ನ ರದ್ದುಗೊಳಿಸಲಾಗಿದೆ. ಆದ್ರೆ, ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸುವುದಾಗಿ ಶಿಕ್ಷಣ ಸಚಿವ ಸುರೇಶಕುಮಾರ ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಕೋವಿಡ್ ನಿಯಂತ್ರಣಕ್ಕೆ ಬಂದ್ರೆ ಮಾತ್ರ ಪರೀಕ್ಷೆ. ಇಲ್ಲದಿದ್ರೆ ಇಲ್ಲ ಎಂದಿದ್ದಾರೆ.

ಈ ಬಗ್ಗೆ ಬೆಳಗಾವಿಯಲ್ಲಿ ಮಾತ್ನಾಡಿದ ಸಿಎಂ, ವಿದ್ಯಾರ್ಥಿಗಳು ಭಯ ಪಡುವ ಅಗತ್ಯವಿಲ್ಲ. ಕರೋನಾ ಸೋಂಕು ನಿಯಂತ್ರಣಕ್ಕೆ ಬಂದ್ರೆ ಮಾತ್ರ ಪರೀಕ್ಷೆ ನಡೆಸಲಾಗುವುದು. ಇಲ್ಲವಾದರೆ ಈ ವರ್ಷ ಪರೀಕ್ಷೆ ನಡೆಸುವುದಿಲ್ಲವೆಂದು ಅಭಯ ನೀಡಿದ್ದಾರೆ.

ಬೆಳಗ್ಗೆ ಸುದ್ದಿಗೋಷ್ಠಿ ನಡೆಸಿದ ಶಿಕ್ಷಣ ಸಚಿವರು, ಪಿಯುಸಿ ಪರೀಕ್ಷೆ ರದ್ದುಗೊಳಿಸಲಾಗಿದೆ. ಎಸ್ಎಸ್ಎಲ್ ಸಿ ಪರೀಕ್ಷೆಯನ್ನ ಜುಲೈ 3ನೇ ವಾರದಲ್ಲಿ ನಡೆಸಲಾಗುವುದು. 1 ಪ್ರಶ್ನೆ ಪತ್ರಿಕೆಯಲ್ಲಿ 3 ವಿಷಯಗಳು ಒಟ್ಟು 120 ಮಾರ್ಕ್ಸ್ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!