ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯನ್ನ ರದ್ದುಗೊಳಿಸಿ, ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸುತ್ತೇವೆ ಎಂದ ಶಿಕ್ಷಣ ಸಚಿವರ ನಿರ್ಧಾರಕ್ಕೆ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ಸಚಿವರು ಯಾಕೆ ಈ ರೀತಿ ಮೊಂಡುತನ ಮಾಡ್ತಿದ್ದಾರೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ.
ಶಿಕ್ಷಣ ಸಚಿವರ ನಿರ್ಧಾರದ ಕುರಿತು ಮಾಜಿ ಸಿಎಂ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿದ್ದು, ಮತಿಗಟ್ಟಂತೆ ವರ್ತಿಸ್ತಿರುವ ಶಿಕ್ಷಣ ಸಚಿವರ ಐಲು ಪೈಲು ನಿರ್ಧಾರ ಕಂಡು ರಾಜ್ಯದ ಜನತೆ ಹಾದಿ ಬೀದಿಯಲ್ಲಿ ನಗಾಡುವಂತಾಗಿದೆ ಎಂದಿದ್ದಾರೆ.