ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಇದೆ ಜುಲೈ 19 ಹಾಗೂ 22ರಂದು ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ನಡೆಯಲಿವೆ. ಈಗಾಗ್ಲೇ ಶಿಕ್ಷಣ ಇಲಾಖೆ ಸಕಲ ಸಿದ್ಧತೆಗಳನ್ನ ಮಾಡಿಕೊಳ್ಳುತ್ತಿದೆ. ಇದರ ನಡುವೆ ಖಾಸಗಿ ಶಿಕ್ಷಣ ಸಂಸ್ಥೆಗಳು, ಪೂರ್ತಿ ಫೀಸ್ ಕಟ್ಟುವ ತನಕ ಹಾಲ್ ಟಿಕೆಟ್ ನೀಡುವುದಿಲ್ಲವೆಂದು ಹೇಳ್ತಿರುವ ವಿಚಾರ ಎಲ್ಲೆಡೆ ಕೇಳಿ ಬಂದಿದೆ.
ಬಹುತೇಕ ಖಾಸಗಿ ಶಾಲೆಗಳಲ್ಲಿ ದುಬಾರಿ ಶುಲ್ಕ ಇರುವುದ್ರಿಂದ, ಕರೋನಾ ಲಾಕ್ ಡೌನ್ ಹೊಡೆತಕ್ಕೆ ತತ್ತರಿಸುವ ಪೋಷಕರು ಕಂಗಾಲಾಗಿದ್ದಾರೆ. ವಿದ್ಯಾರ್ಥಿಗಳಿಗೆ ಮಾನಸಿಕ ಒತ್ತಡ ಹೆಚ್ಚಾಗಿದೆ. ಹೀಗಾಗಿ ಶಿಕ್ಷಣ ಸಚಿವ ಸುರೇಶಕುಮಾರ ಈ ಬಗ್ಗೆ ಮಾತ್ನಾಡಿದ್ದು, ಪೂರ್ತಿ ಶುಲ್ಕ ಕಟ್ಟದಿದ್ರೂ ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ಕೊಡಬೇಕು ಎಂದಿದ್ದಾರೆ. ಇಲ್ಲದಿದ್ರೆ ಅಂತಹ ಶಾಲೆಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.
ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ವಿ.ಅನ್ಬುಕುಮಾರ ಸುತ್ತೋಲೆ ಹೊರಡಿಸಿದ್ದಾರೆ. ಯಾವುದೇ ವಿದ್ಯಾರ್ಥಿ ಮಾನಸಿಕ ಒತ್ತಡಕ್ಕೆ ಒಳಗಾಗದಂತೆ ಜಿಲ್ಲಾ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಶಾಲೆಗಳ ಮುಖ್ಯಸ್ಥರು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದಿದ್ದಾರೆ. ಇಲ್ಲದೆ ಹೋದರೆ ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಸರಿಯಾದ ಕ್ರಮ ತೆಗೆದುಕೊಳ್ಳುತ್ತೆ ಎಂದಿದ್ದಾರೆ.