ಎಸ್ಎಸ್ಎಲ್ ಸಿ ಪರೀಕ್ಷೆ: ರಾಜ್ಯಾದ್ಯಂತ ಗೈರಾದ ವಿದ್ಯಾರ್ಥಿಗಳೆಷ್ಟು?

352

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಇಂದು ಎಸ್ಎಸ್ಎಲ್ ಸಿ ಕನ್ನಡ, ದ್ವಿತೀಯ ಭಾಷೆ ಇಂಗ್ಲಿಷ್ ಮೊದಲ ಪರೀಕ್ಷೆ ನಡೆದಿದೆ. ಕೋವಿಡ್ 19 ಲಾಕ್ ಡೌನ್ ನಿಂದ ಮುಂದೂಡಿದ್ದ ಪರೀಕ್ಷೆ ಇಂದು ನಡೆದಿದೆ. ಈ ಪರೀಕ್ಷೆಗೆ ರಾಜ್ಯಾದ್ಯಂತ 13,212 ಜನ ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶಕುಮಾರ, ಶೇಕಡ 98.3ರಷ್ಟು ವಿದ್ಯಾರ್ಥಿಗಳು ಯಶಸ್ವಿಯಾಗಿ ಪರೀಕ್ಷೆ ಬರೆದಿದ್ದಾರೆ ಎಂದಿದ್ದಾರೆ. ರಾಜ್ಯದ 2,879 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿದೆ.

ಇನ್ನು ವಿದ್ಯಾರ್ಥಿಗಳಿಗಾಗಿ 3,212 ಬಸ್ ವ್ಯವಸ್ಥೆ ಮಾಡಲಾಗಿತ್ತು. ಕಂಟೈನ್ಮೆಂಟ್ ಝೋನ್ ನ 998 ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿತ್ತು. ಗೈರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!