ಪ್ರಜಾಸ್ತ್ರ ಸುದ್ದಿ
ವಿಜಯಪುರ: ಗುರುವಾರ ನಡೆದ ಎಸ್ಎಸ್ಎಲ್ ಸಿ ತೃತೀಯ ಭಾಷಾ ಪರೀಕ್ಷೆ ವೇಳೆ ಸಾಮೂಹಿಕ ನಕಲು ಮಾಡಲು ಅವಕಾಶ ಮಾಡಿ ಕೊಡಲಾಗಿದೆ ಅನ್ನೋ ದೂರು ಬಂದಿದೆ. ಈ ಸಂಬಂಧ ಶನಿವಾರ ನಡೆಯುವ ದ್ವಿತೀಯ ಭಾಷಾ ಪರೀಕ್ಷೆಯ ವೇಳೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ಜಿಲ್ಲಾಧಿಕಾರಿ ಟಿ.ಭೂಬಾಲನ್ ಆದೇಶಿಸಿದ್ದಾರೆ.
ಈಗಾಗ್ಲೇ ಬಂದಿರುವ ದೂರು ಸಂಬಂಧ ತಪ್ಪಿತಸ್ಥರ ವಿರುದ್ದ ಈಗಾಗಲೇ ಶಿಸ್ತು ಕ್ರಮ ಜರುಗಿಸಿದ್ದು, ಶನಿವಾರದಂದು ನಡೆಯುವ ದ್ವಿತೀಯ ಭಾಷಾ ಇಂಗ್ಲೀಷ್ ಪತ್ರಿಕೆಯ ಪರೀಕ್ಷೆಗೆ ಜಿಲ್ಲೆಯ ಎಲ್ಲಾ 127 ಕೇಂದ್ರಗಳಿಗೂ ಚಾಲ್ತಿಯಲ್ಲಿರುವ ಸಿಸಿ ಕ್ಯಾಮರಾಗಳನ್ನು ಅಳವಡಿಸುವ ಕಾರ್ಯವಾಗಬೇಕು. ನಕಲು ಮಾಡುವ ವಿದ್ಯಾರ್ಥಿಗಳನ್ನು ಅಮಾನತು(ಡಿಬಾರ್) ಹಾಗೂ ನಕಲು ಪೂರೈಸುವ, ಸಹಕರಿಸುವವರ ವಿರುದ್ದ ಎಫ್ಐಆರ್ ಮಾಡುವ ಮೂಲಕ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.